ಆ್ಯಪ್ನಗರ

ಕದಂಬೋತ್ಸವ ರೂಪುರೇಷೆ ಚರ್ಚೆ

ಕಾರವಾರ : ಕದಂಬೋತ್ಸವ -2020 ಆಚರಣೆಯ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿಮಾಧ್ಯಮದವರೊಂದಿಗೆ ಮಾತನಾಡಿ ಕದಂಬೋತ್ಸವ ರೂಪು-ರೇಷೆಗಳ ಬಗ್ಗೆ ಚರ್ಚಿಸಿದರು.

Vijaya Karnataka 19 Jan 2020, 5:00 am
ಕಾರವಾರ : ಕದಂಬೋತ್ಸವ -2020 ಆಚರಣೆಯ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿಮಾಧ್ಯಮದವರೊಂದಿಗೆ ಮಾತನಾಡಿ ಕದಂಬೋತ್ಸವ ರೂಪು-ರೇಷೆಗಳ ಬಗ್ಗೆ ಚರ್ಚಿಸಿದರು.
Vijaya Karnataka Web discussion
ಕದಂಬೋತ್ಸವ ರೂಪುರೇಷೆ ಚರ್ಚೆ


ಐತಿಹಾಸಿಕ ಪ್ರಸಿದ್ಧ ಸ್ಥಳವಾದ ಬನವಾಸಿಯಲ್ಲಿಪ್ರತಿವರ್ಷದಂತೆ ಈ ವರ್ಷವೂ ಕದಂಬೋತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ವಿವಿಧ ರೀತಿಯ ಮೇಳ, ಪ್ರದರ್ಶನ, ಯುವ, ಮಹಿಳಾ ವಿಚಾರ ಗೋಷ್ಠಿಗಳು ಹಾಗೂ ನುರಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತಂತೆ ಸಲಹೆ-ಸೂಚನೆಗಳನ್ನು ಪಡೆದು, ಕದಂಬೋತ್ಸವ ಕಾರ್ಯಕ್ರಮವನ್ನು ಒಂದು ಮಾದರಿ ಉತ್ಸವನ್ನಾಗಿ ಮಾಡಬೇಕಾಗಿದೆ ಎಂದರು.

ಕದಂಬೋತ್ಸವಕ್ಕೆ ತೆರಳುವ ಸಾರ್ವಜನಿಕರಿಗೆ ಬಸ್‌ ವ್ಯವಸ್ಥೆ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯೊಂದಿಗೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರನ್ನು ಉತ್ಸವದತ್ತ ಸೆಳೆಯಲು ರಾಜ್ಯ ಮಟ್ಟದ ಖ್ಯಾತ ಕಲಾವಿದರಿಂದ ಕಾರ್ಯಕ್ರಮ, ಫಲಪುಷ್ಪ ಮತ್ತು ತೋಟಗಾರಿಕಾ ಬೆಳೆಗಳ ಪ್ರದರ್ಶನ ಹಾಗೂ ಜಾನುವಾರು ಮತ್ತು ಶ್ವಾನ ಪ್ರದರ್ಶನ, ಅಡುಗೆ ತಯಾರಿಸುವಂತಹ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡು ಯಶಸ್ವಿ ಕದಂಬೋತ್ಸವ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಫೊಟೊ- 18ಸುನೀಲ್‌ 3-

ಕದಂಬೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಅವರು ಕಾರವಾರದಲ್ಲಿಮಾಧ್ಯಮದವರೊಂದಿಗೆ ಚರ್ಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ