Please enable javascript.ಪತ್ರಿಕಾ ವಿತರಕರಿಗೆ ದಿನಸಿ ಕಿಟ್‌ ವಿತರಣೆ - distributing groceries kit to press distributors - Vijay Karnataka

ಪತ್ರಿಕಾ ವಿತರಕರಿಗೆ ದಿನಸಿ ಕಿಟ್‌ ವಿತರಣೆ

Vijaya Karnataka 15 May 2020, 5:00 am
Subscribe

ಹೊನ್ನಾವರ : ಯಾರೂ ಹಸಿವಿನಿಂದ ಬಳಲಬಾರದು. ಕೊರೊನಾ ಲಾಕ್‌ಡೌನ್‌ ಸಂಕಷ್ಟದ ಈ ಸಂದರ್ಭದಲ್ಲಿಪತ್ರಿಕಾ ವಿತರಕರು, ಹೋಂ ಗಾರ್ಡ್‌ಗಳು ಸಂಕಷ್ಟ ಎದುರಿಸುತ್ತಿದ್ದು ಅವರಿಗೆ ನೆರವಿನ ಅಗತ್ಯ ಮನಗಂಡು ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದೇನೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಹೇಳಿದರು.

distributing groceries kit to press distributors
ಪತ್ರಿಕಾ ವಿತರಕರಿಗೆ ದಿನಸಿ ಕಿಟ್‌ ವಿತರಣೆ
ಹೊನ್ನಾವರ : ಯಾರೂ ಹಸಿವಿನಿಂದ ಬಳಲಬಾರದು. ಕೊರೊನಾ ಲಾಕ್‌ಡೌನ್‌ ಸಂಕಷ್ಟದ ಈ ಸಂದರ್ಭದಲ್ಲಿಪತ್ರಿಕಾ ವಿತರಕರು, ಹೋಂ ಗಾರ್ಡ್‌ಗಳು ಸಂಕಷ್ಟ ಎದುರಿಸುತ್ತಿದ್ದು ಅವರಿಗೆ ನೆರವಿನ ಅಗತ್ಯ ಮನಗಂಡು ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದೇನೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದ ಆವಾರದಲ್ಲಿವಿವಿಧ ಪತ್ರಿಕೆಗಳ ವಿತರಕರಿಗೆ, ಏಜೆಂಟರಿಗೆ, ಹೋಂ ಗಾರ್ಡ್‌ಗಳಿಗೆ ದಿನಸಿ ಕಿಟ್‌ ವಿತರಿಸಿ ಮಾತನಾಡಿದರು.

ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸಬೇಕು. ಈ ಸಂಕಷ್ಟ ತಾತ್ಕಾಲಿಕ. ಧೈರ್ಯದಿಂದ ಎದುರಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿತಾ.ಪಂ. ಸದಸ್ಯ ಅಣ್ಣಯ್ಯ ನಾಯ್ಕ, ಮಾಜಿ ಸದಸ್ಯ ರಾಜು ನಾಯ್ಕ, ಮಂಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗೋವಿಂದ ನಾಯ್ಕ, ರಾಜೇಂದ್ರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.


ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ