ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ

ಭಟ್ಕಳ: ಜಿಲ್ಲಾಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಪ್ರೌಢಶಾಲೆ ಸೋನಾರಕೇರಿ ಇವರ ಸಂಯುಕ್ತ ಆಶ್ರಯದಲ್ಲಿ8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ ತಾಲೂಕು ಮಟ್ಟದ ಕಾರ್ಯಕ್ರಮವು ಶಾಸಕ ಸುನೀಲ್‌ ನಾಯ್ಕ ಅಧ್ಯಕ್ಷತೆಯಲ್ಲಿನೆರವೇರಿತು.

Vijaya Karnataka 25 Sep 2019, 5:00 am
ಭಟ್ಕಳ: ಜಿಲ್ಲಾಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಪ್ರೌಢಶಾಲೆ ಸೋನಾರಕೇರಿ ಇವರ ಸಂಯುಕ್ತ ಆಶ್ರಯದಲ್ಲಿ8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ ತಾಲೂಕು ಮಟ್ಟದ ಕಾರ್ಯಕ್ರಮವು ಶಾಸಕ ಸುನೀಲ್‌ ನಾಯ್ಕ ಅಧ್ಯಕ್ಷತೆಯಲ್ಲಿ ನೆರವೇರಿತು.
Vijaya Karnataka Web distribution of bicycles to students
ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ


ಶಾಸಕ ಸುನೀಲ್‌ ನಾಯ್ಕ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯ. ಶಿಕ್ಷಣಕ್ಕಾಗಿ ಸರಕಾರದಿಂದ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದು, ಮಕ್ಕಳು ಹಾಗೂ ಪಾಲಕರು ಈ ಎಲ್ಲಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.

ಜಿ.ಪಂ. ಅಧ್ಯಕ್ಷೆ ಜಯಶ್ರೀ ಮೊಗೇರ ಮಾತನಾಡಿ, ಹಳ್ಳಿಗಳ ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಸೈಕಲ್‌ ಸಹಕಾರಿಯಾಗಿದೆ. ಶಾಲೆಯತ್ತ ಮಕ್ಕಳ ಆಸಕ್ತಿಯೂ ಹೆಚ್ಚಾಗಿದೆ ಎಂದರು. ಜಿ.ಪಂ. ಸದಸ್ಯೆ ಸಿಂಧೂ ಭಾಸ್ಕರ ನಾಯ್ಕ, ಪುರಸಭಾ ಸದಸ್ಯ ರಾಘವೇಂದ್ರ ಶೇಟ್‌, ದೈಹಿಕ ಶಿಕ್ಷಣ ಪರಿವೀಕ್ಷಕ ದೇವರಾಯ ನಾಯಕ್‌ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್‌.ಮುಂಜಿ ಸ್ವಾಗತಿಸಿದರು. ಸೋನಾರಕೇರಿ ಪ್ರೌಢಶಾಲಾ ಮುಖ್ಯಾಧ್ಯಾಪಕ ಶಂಶಾದ್‌ ವಂದಿಸಿದರು. ಶಿಕ್ಷಕ ಮಂಜುನಾಥ ನಾಯ್ಕ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ