ಆ್ಯಪ್ನಗರ

ಕೊರೊನಾ ಸೋಂಕಿತರಿಗೆ ಜಿಲ್ಲೆಯ ಆಸ್ಪತ್ರೆಗಳಲ್ಲೇ ಉತ್ತಮ ಚಿಕಿತ್ಸೆ

ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಇಲ್ಲಎಂಬ ಕೊರಗು ಮೊದಲಿನಿಂದಲೂ ಇದೆ. ಆದರೆ ಕೊರೊನಾ ಸೋಂಕಿತರಿಗೆ ಜಿಲ್ಲೆಯ ಆಸ್ಪತ್ರೆಗಳಲ್ಲಿಯೇ ಉತ್ತಮ ಚಿಕಿತ್ಸೆ ನೀಡುವ ಮೂಲಕ ನಮ್ಮ ಕಾರ್ಯಕ್ಷಮತೆಯನ್ನು ತೋರಿದ್ದೇವೆ

Vijaya Karnataka 30 May 2020, 12:21 am
ಭಟ್ಕಳ: ಉತ್ತರಕನ್ನಡ ಜಿಲ್ಲೆಯಲ್ಲಿಯೇ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಇಲ್ಲಎಂಬ ಕೊರಗು ಮೊದಲಿನಿಂದಲೂ ಇದೆ. ಆದರೆ ಕೊರೊನಾ ಸೋಂಕಿತರಿಗೆ ಜಿಲ್ಲೆಯ ಆಸ್ಪತ್ರೆಗಳಲ್ಲಿಯೇ ಉತ್ತಮ ಚಿಕಿತ್ಸೆ ನೀಡುವ ಮೂಲಕ ನಮ್ಮ ಕಾರ್ಯಕ್ಷಮತೆಯನ್ನು ತೋರಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್‌ ಹೇಳಿದರು.
Vijaya Karnataka Web ಕೊರೊನಾ ವೈರಸ್‌
ಕೊರೊನಾ ವೈರಸ್‌


ಭಟ್ಕಳದಲ್ಲಿಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಭಟ್ಕಳದ ಎಲ್ಲ ಕೊರೊನಾ ಸೋಂಕಿತರು ಜಿಲ್ಲೆಯ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಐದು ತಿಂಗಳ ಅಪಸ್ಮಾರ ಇರುವ ಮಗುವನ್ನೂ ಸಹ ನಮ್ಮ ವೈದ್ಯರು ಗುಣಪಡಿಸಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಹೈಟೆಕ್‌ ಆಸ್ಪತ್ರೆ ಇಲ್ಲದೇ ಇದ್ದರೂ ಇಲ್ಲಿಯಾವುದೇ ಸಾವು ಸಂಭವಿಸಿಲ್ಲಎಂದರು.

ಭಟ್ಕಳದಲ್ಲಿ ಕೊರೊನಾ ಸೋಂಕಿನ ಮೂಲ ಪತ್ತೆಯಾದ ಕಾರಣ ಹೆಚ್ಚಿನ ತೊಂದರೆಯಾಗಿಲ್ಲ. ಜೀವ, ಜೀವನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇರುವುದರಿಂದ ಪ್ರಾಯೋಗಿಕವಾಗಿ ಹಲವಾರು ವ್ಯವಸ್ಥೆಗಳನ್ನು ನೀಡಿದ್ದೇವೆ, ಕಳೆದ 70 ದಿನಗಳಿಂದ ಭಟ್ಕಳದ ಜನರು ಲಾಕ್‌ಡೌನ್‌ಗೆ ಉತ್ತಮವಾಗಿ ಸ್ಪಂದಿಸಿದ್ದಾರೆ.

ಮುಂದಿನ ದಿನಗಳಲ್ಲಿ ಹೇಗೆ ಸಡಿಲಿಕೆ ಮಾಡಬೇಕು ಎನ್ನುವುದು ಜನರ ವರ್ತನೆಯನ್ನು ಅವಲಂಬಿಸಿದೆ. ಹೊರಗಿನಿಂದ ಯಾರೇ ಬಂದರೂ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು. ಮುಂದಿನ ದಿನಗಳಲ್ಲಿ ಎಲ್ಲ ಆಸ್ಪತ್ರೆಗಳೂ ಕಾರ್ಯಾರಂಭ ಮಾಡಲಿವೆ, ಮಳೆಗಾಲದಲ್ಲಿ ಜ್ವರ, ಶೀತ ಹೆಚ್ಚಾಗುವ ಸಾಧ್ಯತೆ ಇದ್ದು, ಎಲ್ಲಶೀತ, ಜ್ವರಗಳೂ ಕೋವಿಡ್‌ 19 ಆಗಲಾರದು. ಆದರೆ ಜನರು ಯಾವುದನ್ನೂ ಮುಚ್ಚಿಡಬಾರದು.

ಅದಕ್ಕಾಗಿ ಎಲ್ಲಮೆಡಿಕಲ್‌ ಸ್ಟೋರ್ಸ್, ಆಸ್ಪತ್ರೆಯ ಮೇಲೆ ನಿಗಾ ಇಡಲಾಗುವುದು, ಜನರು ಕೊರೊನಾಕ್ಕೆ ಭಯಪಡುವ ಅಗತ್ಯ ಇಲ್ಲ. ಜಿಲ್ಲಾಡಳಿತ ನಿಮ್ಮೊಂದಿಗೆ ಇರಲಿದೆ ಎಂದು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ