ಆ್ಯಪ್ನಗರ

ಆಯುಷ್ಮಾನ್‌ ಕಾರ್ಡ್‌ ವಿತರಣಾ ಕೇಂದ್ರಕ್ಕೆ ಚಾಲನೆ

ಹೊನ್ನಾವರ: ಇಲ್ಲಿಯ ತಾಲೂಕು ಆಸ್ಪತ್ರೆಯ ಆವಾರದಲ್ಲಿಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.

Vijaya Karnataka 31 Aug 2019, 5:00 am
ಹೊನ್ನಾವರ: ಇಲ್ಲಿಯ ತಾಲೂಕು ಆಸ್ಪತ್ರೆಯ ಆವಾರದಲ್ಲಿಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.
Vijaya Karnataka Web drive to ayushmann card distribution center
ಆಯುಷ್ಮಾನ್‌ ಕಾರ್ಡ್‌ ವಿತರಣಾ ಕೇಂದ್ರಕ್ಕೆ ಚಾಲನೆ


ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರ್ಕಾರದ ಕನಸಿನ ಯೋಜನೆ ಇದಾಗಿದ್ದು, ಜನತೆಗೆ ಪ್ರಯೋಜನವಾಗಲಿದೆ ಎಂದರು.

ರಾಜ್ಯದ ಆರೊಗ್ಯ ಕರ್ನಾಟಕ ಯೋಜನೆ ಸೇರಿಸಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಲ್ಲಿಕೆಲವೊಂದು ದೋಷಗಳಿದ್ದು ಅವನ್ನು ಸರಿಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೊಗ್ಯ ಸಚೀವರ ಗಮನಕ್ಕೆ ತಂದು ಬಗೆಹರಿಸಲಾಗುವುದು. ಯೋಜನೆಯ ನಿಯಮಗಳನ್ನು ಸರಳಿಕರಣಗೊಳಿಸುವ ನಿಟ್ಟಿನಲ್ಲಿಈಗಾಗಲೇ ಚರ್ಚಿಸಲಾಗಿದೆ ಎಂದರು.

ನಂತರ ಫಲಾನುಭವಿಗಳಿಗೆ ಕಾರ್ಡ್‌ ವಿತರಿಸಿದರು.: ತಾಲೂಕಾ ಆರೊಗ್ಯಧಿಕಾರಿ ಡಾ. ರಾಜೇಶ ಕಿಣಿ ಮಾತನಾಡಿ ತಾಲೂಕಿನಲ್ಲಿಈ ವರೆಗೆ ಒಟ್ಟು 1356 ಒಳರೋಗಿಗಳು ಈ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಪ್ರತಿದಿನಕ್ಕೆ 50 ಕಾರ್ಡಗಳನ್ನು ಮಾಡಿಕೊಡಲಾಗುವುದು. ಪ್ರತಿಯೊಬ್ಬ ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡದಾರರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿದ್ದು ಹಂತಹಂತವಾಗಿ ಎಲ್ಲರಿಗೂ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿಶಾಸಕ ಸುನೀಲ ನಾಯ್ಕ, ಪಟ್ಟಣ ಪಂಚಾಯತ ಸದಸ್ಯ ಮಹೇಶ ಮೇಸ್ತ, ಬಿಜೆಪಿ ಮುಖಂಡರಾದ ಉಮೇಶ ನಾಯ್ಕ, ಮಂಜುನಾಥ ನಾಯ್ಕ., ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ