ಆ್ಯಪ್ನಗರ

ಗ್ರಾಮ ಸಡಕ್‌ ಯೋಜನೆಯ ಗ್ರಾಮೀಣ ರಸ್ತೆ ,ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಅಭಿವೃದ್ಧಿ ಕಾಮಗಾರಿಗೆ ಚಾಲನೆವಿಕ ಸುದ್ದಿಲೋಕ, ಕುಮಟಾತಾಲೂಕಿನ ಕೂಜಳ್ಳಿಯಲ್ಲಿಹಲವು ಗ್ರಾಮಗಳನ್ನು ಸಂಪರ್ಕಿಸುವ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯ ಮೂರನೇ ಹಂತದ ಗ್ರಾಮೀಣ ...

Vijaya Karnataka 12 Aug 2020, 5:00 am
ಕುಮಟಾ: ತಾಲೂಕಿನ ಕೂಜಳ್ಳಿಯಲ್ಲಿಹಲವು ಗ್ರಾಮಗಳನ್ನು ಸಂಪರ್ಕಿಸುವ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯ ಮೂರನೇ ಹಂತದ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೆನರಾ ಸಂಸದ ಅನಂತಕುಮಾರ ಹೆಗಡೆ ಚಾಲನೆ ನೀಡಿದರು.
Vijaya Karnataka Web PHT 11 KMT 1_24
ಕೂಜಳ್ಳಿಯಲ್ಲಿ4.15 ಕೋಟಿ ರೂಪಾಯಿ ವೆಚ್ಚದ ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆಯ ಮೂರನೇ ಹಂತದ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೆನರಾ ಸಂಸದ ಅನಂತಕುಮಾರ ಹೆಗಡೆ ಚಾಲನೆ ನೀಡಿದರು.


ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯ ಮೂರನೇ ಹಂತದ ಸುಮಾರು 4.15 ಕೋಟಿ ರೂ. ವೆಚ್ಚದ ಹೆಗಲೆ-ಗೌಡರಕೊಪ್ಪ, ಗೌಡರಕೇರಿ, ಬಚಖಂಡ, ಕೆಳಗಿನಕೇರಿ, ಕೆಳಗಿನಕೊಪ್ಪದವರೆಗಿನ 5.23 ಕಿಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ನಂತರ ಮಾತನಾಡಿದ ಅವರು ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಕೇಂದ್ರ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.

ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಜಿಲ್ಲೆಯ ಹಲವು ತಾಲೂಕುಗಳಲ್ಲಿಅಭಿವೃದ್ಧಿ ಪರ್ವ ಆರಂಭವಾಗಿದೆ. ಕರಾವಳಿ ಆರ್ಥಿಕ ವಲಯವನ್ನು ಅಭಿವೃದ್ಧಿ ಪಡಿಸಲು ಚಿಂತಿಸಲಾಗುತ್ತಿದೆ. ಹೊನ್ನಾವರ, ಅಂಕೋಲಾ ಬೇಲೆಕೇರಿ ಬಂದರು ಅಭಿವೃದ್ಧಿಪಡಿಸಲಾಗುವುದು. ಏರ್‌ಪೋರ್ಟ್‌ ನಿರ್ಮಾಣ, ನ್ಯಾಷನಲ್‌ ಹೈವೇ ಅಭಿವೃದ್ಧಿ ಸೇರಿದಂತೆ ಜಿಲ್ಲೆಯಲ್ಲಿಕಲ್ಪನೆಗೂ ನಿಲುಕದ ಅಭಿವೃದ್ಧಿ ಕಾಣಲಿದ್ದೇವೆ. ಇನ್ನು ಬಿಎಸ್‌ಎನ್‌ಎಲ್‌ ವ್ಯವಸ್ಥೆಯನ್ನು ಬಲಗೊಳಿಸಲಾಗುವುದು ಎಂದು ಹೇಳಿದರು.

ಶಾಸಕ ದಿನಕರ ಶೆಟ್ಟಿ, ಭಟ್ಕಳ ಶಾಸಕ ಸುನೀಲ್‌ ನಾಯ್ಕ, ಜಿಲ್ಲಾಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ, ನಾಗರಾಜ ನಾಯಕ, ಜಿ.ಐ.ಹೆಗಡೆ, ಪ್ರಶಾಂತ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ