ಆ್ಯಪ್ನಗರ

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ 16ರಿಂದ

ಶಿರಸಿ: ಇಲ್ಲಿಯ ಅರುಣೋದಯ ತರಬೇತಿ ಕೇಂದ್ರದಲ್ಲಿಆರು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಸೆ.16ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದೆ.

Vijaya Karnataka 10 Sep 2019, 5:00 am
ಶಿರಸಿ: ಇಲ್ಲಿಯ ಅರುಣೋದಯ ತರಬೇತಿ ಕೇಂದ್ರದಲ್ಲಿಆರು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಸೆ.16ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದೆ.
Vijaya Karnataka Web entrepreneurial development training 16
ಉದ್ಯಮಶೀಲತಾ ಅಭಿವೃದ್ಧಿ ತರಬೇತಿ 16ರಿಂದ


ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಅರುಣೋದಯ ಟ್ರಸ್ಟ್‌ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ, ದಿಶಾ ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ ಕಾರವಾರ ಸಹಯೋಗದಲ್ಲಿನಡೆಯುವ ತರಬೇತಿಯಲ್ಲಿಉದ್ಯಮಶೀಲತೆಯ ಮಹತ್ವ ಹಾಗೂ ಸಾಮರ್ಥ್ಯ, ಉದ್ಯಮಶೀಲರ ಆಕರ್ಷಣೆ, ತಾಲೂಕಿನಲ್ಲಿಲಭ್ಯವಿರುವ ಸಂಪನ್ಮೂಲಗಳು ಹಾಗೂ ಉದ್ಯಮಶೀಲತಾ ಚಟುವಟಿಕೆ ಪ್ರಾರಂಭಿಸಲು ಅವಕಾಶಗಳು ಹಾಗೂ ಸಂಭಾವ್ಯತೆ, ಉದ್ಯಮ ಪ್ರಾರಂಭಿಸುವಲ್ಲಿಸಹಾಯ ನೀಡುತ್ತಿರುವ ಸಂಸ್ಥೆಗಳ ಪಾತ್ರ, ಉದ್ಯಮ ಪ್ರಾರಂಭಿಸಲು ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳು ಹಾಗೂ ಬ್ಯಾಂಕಿನಿಂದ ಸಿಗುತ್ತಿರುವ ಸೌಲಭ್ಯಗಳು, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಮುಂತಾದ ಮಾಹಿತಿಗಳನ್ನು ನೀಡಲಾಗುವುದು. ಆಸಕ್ತಿಯುಳ್ಳ ನಿರುದ್ಯೋಗಿ ಯುವಕ, ಯುವತಿಯರು ಈ ತರಬೇತಿಗೆ ಹಾಜರಾಗಬಹುದು. ಅಭ್ಯರ್ಥಿಗಳು 18-40 ವಯಸ್ಸಿನ ವಯೋಮಿತಿ ಹೂಂದಿದ್ದು, ಕನಿಷ್ಠ 8ನೇ ತರಗತಿ ಪಾಸಾಗಿರಬೇಕು.

ಆಸಕ್ತಿಯುಳ್ಳವರು ಸೆ.12ರೊಳಗೆ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಶಿವಾನಂದ ವೆಂ. ಎಲಿಗಾರ, ಉಪ ನಿರ್ದೇಶಕರು, ಸಿಡಾಕ್‌, ಶಿರವಾಡ, ಕಾರವಾರ (9448812974) ಪ್ರತಿಭಾ, ಕೌನ್ಸಲರ, ಸಿಡಾಕ್‌-ದಿಶಾ, ಕಾರವಾರ (8105224080) ಶಾಂತಯ್ಯಾ ಎಚ್‌. ಪೂಜಾರ (9901914945) ಸವಿತಾ ಮಂಡೂರ್‌, ಸಂಚಾಲಕರು ಅರುಣೋದಯ ತರಬೇತಿ ಕೇಂದ್ರ, ಶಿರಸಿ (8660948515) ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ