ಆ್ಯಪ್ನಗರ

ಎಸ್ಸೆಸ್ಸೆಲ್ಸಿ: ಉತ್ತಮ ಅಂಕ ಗಳಿಸಿದವರ ಸನ್ಮಾನ

ಹೊನ್ನಾವರ : ತಾಲೂಕಿನ ಕಾಸರಕೋಡ ಜನತಾ ವಿದ್ಯಾಲಯದಲ್ಲಿ ಬೆಂಗಳೂರಿನ ಅಮ್ಮೆಂಬಳ ನಾರಾಯಣ ಪೈ ಸ್ಮರಣಾರ್ಥ ಕೆನರಾ ಬ್ಯಾಂಕ್‌ ಜ್ಯುಬಿಲಿ ಫಂಡ್‌ ಹಾಗೂ ಹೊನ್ನಾವರದ ಸಂಗಮ ಸೇವಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿನ ಶಾಲೆಗೆ ಪ್ರಥಮ ಸ್ಥಾನ ಹಾಗೂ ಕನ್ನಡ ವಿಷಯದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ನಡೆಯಿತು.

Vijaya Karnataka 5 Aug 2019, 5:00 am
ಹೊನ್ನಾವರ : ತಾಲೂಕಿನ ಕಾಸರಕೋಡ ಜನತಾ ವಿದ್ಯಾಲಯದಲ್ಲಿ ಬೆಂಗಳೂರಿನ ಅಮ್ಮೆಂಬಳ ನಾರಾಯಣ ಪೈ ಸ್ಮರಣಾರ್ಥ ಕೆನರಾ ಬ್ಯಾಂಕ್‌ ಜ್ಯುಬಿಲಿ ಫಂಡ್‌ ಹಾಗೂ ಹೊನ್ನಾವರದ ಸಂಗಮ ಸೇವಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿನ ಶಾಲೆಗೆ ಪ್ರಥಮ ಸ್ಥಾನ ಹಾಗೂ ಕನ್ನಡ ವಿಷಯದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ನಡೆಯಿತು.
Vijaya Karnataka Web esscelsi felicitation of the best scorer
ಎಸ್ಸೆಸ್ಸೆಲ್ಸಿ: ಉತ್ತಮ ಅಂಕ ಗಳಿಸಿದವರ ಸನ್ಮಾನ


ಮುಖ್ಯಾಧ್ಯಾಪಕಿ ಫಿಲೋಮಿನಾ ರೋಡ್ರಿಗಲ್ಸ್‌ ಅಧ್ಯಕ್ಷ ತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮಣಿಪಾಲದ ನಿವೃತ್ತ ಪ್ರಾಂಶುಪಾಲೆ ಲಕ್ಷ್ಮೀ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲೂ ಮುಂದಿದ್ದಾರೆ ಎಂದರು.

ವೇದಿಕೆಯಲ್ಲಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ ಆಡಳಿತಾಧಿಕಾರಿ ಪಿ.ಜಿ.ಕಿಣಿ, ಹೊಲಿಗೆ ಶಿಕ್ಷ ಕಿ ಸಂಧ್ಯಾ ಭಟ್‌ ಹಾಗೂ ಕೆನರಾ ಬ್ಯಾಂಕ್‌ನ ಅಧಿಕಾರಿ ರಾಘವೇಂದ್ರ ಉಪಸ್ಥಿತರಿದ್ದರು. ಸಂಗಮ ಸೇವಾ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಸ್ವಾಗತಿಸಿದರು. ತಿಮ್ಮಣ್ಣ ಭಟ್‌ ವಂದಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ