ಕಾರವಾರ: ಹಾಲಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಮಾಜಿ ಶಾಸಕ ಸತೀಶ್ ಸೈಲ್ ನಡುವಿನ ಜಟಾಪಟಿ ಹೊಸತೇನಲ್ಲ. ಇದೀಗ ಪಿಡಿಒ ಒಬ್ಬರ ವರ್ಗಾವಣ ವಿಚಾರವಾಗಿ ನಡೆದ ಮಾತುಕತೆ ಪ್ರತಿಭಟನೆಗೆ ತಿರುಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ನಾಯಕರ ಪರ ಪ್ರತಿಭಟನೆ ನಡೆಸುವ ಮೂಲಕ ಪರಸ್ಪರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿಗೆ ಪಿಡಿಓ ಓರ್ವರ ವರ್ಗಾವಣೆ ವಿಚಾರ ಸಂಬಂಧ ಕಾರವಾರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಮಾತುಕತೆ ನಡೆಸುವ ವೇಳೆ ಶಾಸಕಿ ರೂಪಾಲಿ ನಾಯ್ಕ ಹಾಗೂ ಮಾಜಿ ಶಾಸಕ ಸತೀಶ್ ಸೈಲ್ ನಡುವೆ ಜಟಾಪಟಿ ನಡೆದಿತ್ತು. ಈ ಜಟಾಪಟಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಲ್ಲದೇ, ಇಬ್ಬರು ನಾಯಕರು ಕಾರವಾರ ನಗರ ಠಾಣೆಯಲ್ಲಿ ಪರಸ್ಪರ ದೂರು ನೀಡಿದ್ದರು.
ಇದೇ ವಿಚಾರವಾಗಿ ಒಬ್ಬರಿಗೊಬ್ಬರು ಪರಸ್ಪರ ಆರೋಪ- ಪ್ರತ್ಯಾರೋಪ ಸಹ ಮಾಡಿಕೊಂಡಿದ್ದು ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಮಾತ್ರವಲ್ಲದೇ ಇಡೀ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆದರೆ ಈ ವಿಚಾರ ಅಲ್ಲಿಗೇ ನಿಲ್ಲದೇ, ಕಾರ್ಯಕರ್ತರ ಪ್ರತಿಭಟನೆಯವರೆಗೂ ತಲುಪಿದೆ.
ಸೈಲ್ ಕೆಟ್ಟದಾಗಿ ಕೈ ಸನ್ನೆ ಮಾಡಿದ್ದಾರೆ
ಶನಿವಾರ ಶಾಸಕಿ ರೂಪಾಲಿ ನಾಯ್ಕ ಬೆಂಬಲಿಗರು ಹಾಗೂ ಬಿಜೆಪಿ ಮಹಿಳಾ ಕಾರ್ಯಕರ್ತರು ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಮಾಜಿ ಶಾಸಕ ಸತೀಶ್ ಸೈಲ್ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಸತೀಶ್ ಸೈಲ್ ಗೌರವಾನ್ವಿತ ಸ್ಥಾನದಲ್ಲಿರುವ ಶಾಸಕರ ಮೇಲೆ ದರ್ಪ ತೋರಿದ್ದು, ಹಲ್ಲೆಗೆ ಸಹ ಮುಂದಾಗಿದ್ದಾರೆ. ಅಲ್ಲದೇ ಅವಾಚ್ಯ ಶಬ್ದದಿಂದ ನಿಂದಿಸಿದ್ದು ಕೆಟ್ಟದಾಗಿ ಕೈ ಸನ್ನೆ ಮಾಡಿ ಎಲ್ಲಾ ಪುರುಷರ ನಡುವೆ ಮಹಿಳಾ ಶಾಸಕಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನ ಸಹ ರವಾನಿಸಿದ್ದಾರೆ.
ಶಾಸಕಿ ವಿರುದ್ಧ ಪ್ರಕರಣ ದಾಖಲಿಸಿ
ಇತ್ತ ಇಂದು ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ನಿಂದ ಕಾರವಾರದ ಮಿತ್ರಸಮಾಜದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಲಾಗಿದೆ. ಶಾಸಕಿಯ ವಿರುದ್ಧ ಘೋಷಣೆಗಳನ್ನ ಕೂಗಲಾಗಿದೆ. ಕೂಡಲೇ ಶಾಸಕಿಯ ವಿರದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು, ಇಲ್ಲದಿದ್ದರೆ ಕಾರವಾರವನ್ನು ಬಂದ್ ಮಾಡಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಘಟನೆ ಹಿನ್ನೆಲೆ
ಕಾರಾವಾರ ತಾಲೂಕಿನ ಮಾಜಾಳಿ ಪಿಡಿಒ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸತೀಶ್ ಸೈಲ್ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಬಳಿ ಮಾತನಾಡುವ ಸಲುವಾಗಿ ತೆರಳಿದ್ದರು. ಅದೇ ಸಮಯಕ್ಕೆ ಅಲ್ಲಿಗೆ ಶಾಸಕಿ ರೂಪಾಲಿ ನಾಯ್ಕ ಕೂಡ ಬಂದಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ರೂಪಾಲಿ ನನ್ನನ್ನು ವೇಯ್ಟರ್ ನಿಂದ ಹೊಡೆಯಲು ಬಂದಿದ್ದರು, ಕುಡುಕ ಎನ್ನುವ ಪದ ಬಳಕೆ ಮಾಡಿದ್ದರು ಎಂದು ಸೈಲ್ ಆರೋಪಿಸಿದ್ದರು. ಇದನ್ನು ಅಲ್ಲಗೆಳೆದಿದ್ದ ರೂಪಾಲಿ ನಾಯ್ಕ ಅವರು, ಸೈಲ್ ನನ್ನ ತಂದೆಯ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು.
ಒಟ್ಟಿನಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಜಟಾಪಟಿ ಚುನಾವಣೆ ಸಮೀಪಿಸುತ್ತಿರುವುದರಿಂದ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಬ್ಬರು ನಾಯಕರಲ್ಲಿ ಈ ಗಲಾಟೆ ಯಾರಿಗೆ ಪ್ಲಸ್ ಆಗಲಿದೆ, ಯಾರಿಗೆ ಮೈನೆಸ್ ಆಗಲಿದೆ ಎನ್ನುವುದನ್ನ ಕಾದು ನೋಡಬೇಕಿದೆ.
ಇದೇ ವಿಚಾರವಾಗಿ ಒಬ್ಬರಿಗೊಬ್ಬರು ಪರಸ್ಪರ ಆರೋಪ- ಪ್ರತ್ಯಾರೋಪ ಸಹ ಮಾಡಿಕೊಂಡಿದ್ದು ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಮಾತ್ರವಲ್ಲದೇ ಇಡೀ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆದರೆ ಈ ವಿಚಾರ ಅಲ್ಲಿಗೇ ನಿಲ್ಲದೇ, ಕಾರ್ಯಕರ್ತರ ಪ್ರತಿಭಟನೆಯವರೆಗೂ ತಲುಪಿದೆ.
ಸೈಲ್ ಕೆಟ್ಟದಾಗಿ ಕೈ ಸನ್ನೆ ಮಾಡಿದ್ದಾರೆ
ಶನಿವಾರ ಶಾಸಕಿ ರೂಪಾಲಿ ನಾಯ್ಕ ಬೆಂಬಲಿಗರು ಹಾಗೂ ಬಿಜೆಪಿ ಮಹಿಳಾ ಕಾರ್ಯಕರ್ತರು ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಮಾಜಿ ಶಾಸಕ ಸತೀಶ್ ಸೈಲ್ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಸತೀಶ್ ಸೈಲ್ ಗೌರವಾನ್ವಿತ ಸ್ಥಾನದಲ್ಲಿರುವ ಶಾಸಕರ ಮೇಲೆ ದರ್ಪ ತೋರಿದ್ದು, ಹಲ್ಲೆಗೆ ಸಹ ಮುಂದಾಗಿದ್ದಾರೆ. ಅಲ್ಲದೇ ಅವಾಚ್ಯ ಶಬ್ದದಿಂದ ನಿಂದಿಸಿದ್ದು ಕೆಟ್ಟದಾಗಿ ಕೈ ಸನ್ನೆ ಮಾಡಿ ಎಲ್ಲಾ ಪುರುಷರ ನಡುವೆ ಮಹಿಳಾ ಶಾಸಕಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನ ಸಹ ರವಾನಿಸಿದ್ದಾರೆ.
ಶಾಸಕಿ ವಿರುದ್ಧ ಪ್ರಕರಣ ದಾಖಲಿಸಿ
ಇತ್ತ ಇಂದು ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ನಿಂದ ಕಾರವಾರದ ಮಿತ್ರಸಮಾಜದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಲಾಗಿದೆ. ಶಾಸಕಿಯ ವಿರುದ್ಧ ಘೋಷಣೆಗಳನ್ನ ಕೂಗಲಾಗಿದೆ. ಕೂಡಲೇ ಶಾಸಕಿಯ ವಿರದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು, ಇಲ್ಲದಿದ್ದರೆ ಕಾರವಾರವನ್ನು ಬಂದ್ ಮಾಡಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಘಟನೆ ಹಿನ್ನೆಲೆ
ಕಾರಾವಾರ ತಾಲೂಕಿನ ಮಾಜಾಳಿ ಪಿಡಿಒ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸತೀಶ್ ಸೈಲ್ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಬಳಿ ಮಾತನಾಡುವ ಸಲುವಾಗಿ ತೆರಳಿದ್ದರು. ಅದೇ ಸಮಯಕ್ಕೆ ಅಲ್ಲಿಗೆ ಶಾಸಕಿ ರೂಪಾಲಿ ನಾಯ್ಕ ಕೂಡ ಬಂದಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ರೂಪಾಲಿ ನನ್ನನ್ನು ವೇಯ್ಟರ್ ನಿಂದ ಹೊಡೆಯಲು ಬಂದಿದ್ದರು, ಕುಡುಕ ಎನ್ನುವ ಪದ ಬಳಕೆ ಮಾಡಿದ್ದರು ಎಂದು ಸೈಲ್ ಆರೋಪಿಸಿದ್ದರು. ಇದನ್ನು ಅಲ್ಲಗೆಳೆದಿದ್ದ ರೂಪಾಲಿ ನಾಯ್ಕ ಅವರು, ಸೈಲ್ ನನ್ನ ತಂದೆಯ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು.
ಒಟ್ಟಿನಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಜಟಾಪಟಿ ಚುನಾವಣೆ ಸಮೀಪಿಸುತ್ತಿರುವುದರಿಂದ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಬ್ಬರು ನಾಯಕರಲ್ಲಿ ಈ ಗಲಾಟೆ ಯಾರಿಗೆ ಪ್ಲಸ್ ಆಗಲಿದೆ, ಯಾರಿಗೆ ಮೈನೆಸ್ ಆಗಲಿದೆ ಎನ್ನುವುದನ್ನ ಕಾದು ನೋಡಬೇಕಿದೆ.