ಆ್ಯಪ್ನಗರ

ಮನೆಗೆ ಬೆಂಕಿ ಅಪಾರ ಹಾನಿ: ಶಾಸಕ ಪರಿಶೀಲನೆ

ಮುಂಡಗೋಡ: ತಾಲೂಕಿನ ಅಜ್ಜಳ್ಳಿ ಗ್ರಾಮದಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ ಹಿನ್ನಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 29 Jan 2019, 5:00 am
ಮುಂಡಗೋಡ: ತಾಲೂಕಿನ ಅಜ್ಜಳ್ಳಿ ಗ್ರಾಮದಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ ಹಿನ್ನಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web fire fires huge damage mla verdict
ಮನೆಗೆ ಬೆಂಕಿ ಅಪಾರ ಹಾನಿ: ಶಾಸಕ ಪರಿಶೀಲನೆ


ಅಜ್ಜಳ್ಳಿ ಗ್ರಾಮದ ರೇಣುಕಾ ಈರಪ್ಪ ಪಾಯಣ್ಣವರ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಕರಕಲಾಗಿತ್ತು. ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು ಹಾಗೂ ದಿನಬಳಕೆಯ ವಸ್ತುಗಳು ಸುಟ್ಟು ಹಾಳಾಗಿತ್ತು ಇದರಿಂದ 5 ಲಕ್ಷ ಕ್ಕೂ ಹೆಚ್ಚು ಹಾನಿ ಸಂಭವಿಸುತ್ತು, ಈ ಹಿನ್ನಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ ಮುಖಂಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರಕಾರದಿಂದ ಕೂಡಲೆ ಪರಿಹಾರ ಒದಗಿಸಿ ಕೊಡಲಾಗುವುದು ಹಾಗೂ ಗ್ರಾಮ ಪಂಚಾಯಿತಿಯಿಂದ ಮನೆ ಮಂಜೂರಿ ಮಾಡಿಸಿ ಕೊಡಲಾಗುವುದು ಎಂದು ಹೇಳಿದರು.

ಈ ವೇಳೆ ಜಿ.ಪಂ.ಸದಸ್ಯ ರವಿಗೌಡ ಪಾಟೀಲ, ಎಪಿಎಂಸಿ ಅಧ್ಯಕ್ಷ ದೇವು ಪಾಟೀಲ, ಎಂ.ಪಿ.ಕುಸೂರ, ಗಣಪತಿ ವಡ್ಡರ, ಜ್ಞಾನದೇವ ಗುಡಿಯಾಳ, ಅಶೋಕ ಶಿರ್ಮಾಪುರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ