ಆ್ಯಪ್ನಗರ

ಅರಣ್ಯ ರಕ್ಷಣೆಗೆ ಎಲ್ಲರ ಸಹಕಾರ ಅವಶ್ಯ

ಯಲ್ಲಾಪುರ : ಅರಣ್ಯ ಇಲಾಖೆಯ ವತಿಯಿಂದ ಬುಧವಾರ ಚಿಣ್ಣರ ವನದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.

Vijaya Karnataka 23 Jan 2020, 5:00 am
ಯಲ್ಲಾಪುರ : ಅರಣ್ಯ ಇಲಾಖೆಯ ವತಿಯಿಂದ ಬುಧವಾರ ಚಿಣ್ಣರ ವನದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
Vijaya Karnataka Web 22 YLP 3_24
ಯಲ್ಲಾಪುರ ಪಟ್ಟಣದ ಸಬಗೇರಿ ಸಸ್ಯಪಾಲನಾ ಕ್ಷೇತ್ರದಲ್ಲಿಬುಧವಾರ ನಡೆದ ಚಿಣ್ಣರ ವನದರ್ಶನ ಕಾರ್ಯಕ್ರಮದಲ್ಲಿಡಿಎಫ್‌ಒ ಗೋಪಾಲಕೃಷ್ಣ ಹೆಗಡೆ ಅರಣ್ಯ ಸಂರಕ್ಷಣೆ ಮಾಹಿತಿ ನೀಡಿದರು.


ಪಟ್ಟಣದ ಸಬಗೇರಿ ಬಳಿ ಇರುವ ಸಸ್ಯಪಾಲನಾ ಕ್ಷೇತ್ರದಲ್ಲಿಕಾಳಮ್ಮನಗರದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಪಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ ಅರಣ್ಯ ಸಂರಕ್ಷಣೆ ಮತ್ತು ಅರಣ್ಯ, ಸಸ್ಯ ಸಂಕುಲಗಳ ಮಹತ್ವದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಬಾಲ್ಯದಿಂದಲೇ ಅರಣ್ಯ ರಕ್ಷಣೆಗೆ ಹಾಗೂ ಪರಿಸರದ ಉಳಿವಿಗೆ ನಾವು ಕಾರ್ಯಪ್ರವೃತ್ತರಾಗಬೇಕು ಎಂದರು. ಸಸ್ಯಪಾಲನಾ ಕ್ಷೇತ್ರದಲ್ಲಿಬೆಳೆಸಲಾದ ವಿವಿಧ ಜಾತಿಯ ಸಸಿಗಳನ್ನು ಹಾಗೂ ಅವುಗಳ ಕುರಿತಾದ ಮಾಹಿತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಶಾಲಾ ಮಕ್ಕಳಿಗೆ ನೀಡಿದರು.

ಈ ಸಂದರ್ಭದಲ್ಲಿಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಭಟ್ಟ, ಯಲ್ಲಾಪುರ ವಲಯ ಅರಣ್ಯಾಧಿಕಾರಿ ಬಾಲಸುಬ್ರಹ್ಮಣ್ಯ ಹಾಗೂ ಶಿಕ್ಷಕರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ