ಆ್ಯಪ್ನಗರ

ಇಂದಿನಿಂದ ಉಳವಿ ಶ್ರೀ ಚನ್ನಬಸವೇಶ್ವರ ಜಾತ್ರೆ

ಕಾರವಾರ : ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಉಳವಿಯ ಶ್ರೀ ಚನ್ನಬಸವೇಶ್ವರ ಜಾತ್ರಾ ಮಹೋತ್ಸವವು ಫೆ.12ರಿಂದ 21ರವರೆಗೆ ನಡೆಯಲಿದೆ. ಫೆ.19ರ ಸಂಜೆ 4ಕ್ಕೆ ಮಹಾರಥೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್‌ ಅಧ್ಯಕ್ಷ ಗಂಗಾಧರ ಚೆನ್ನಪ್ಪ ಕಿತ್ತೂರ ತಿಳಿಸಿದರು.

Vijaya Karnataka 12 Feb 2019, 5:00 am
ಕಾರವಾರ : ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಉಳವಿಯ ಶ್ರೀ ಚನ್ನಬಸವೇಶ್ವರ ಜಾತ್ರಾ ಮಹೋತ್ಸವವು ಫೆ.12ರಿಂದ 21ರವರೆಗೆ ನಡೆಯಲಿದೆ. ಫೆ.19ರ ಸಂಜೆ 4ಕ್ಕೆ ಮಹಾರಥೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್‌ ಅಧ್ಯಕ್ಷ ಗಂಗಾಧರ ಚೆನ್ನಪ್ಪ ಕಿತ್ತೂರ ತಿಳಿಸಿದರು.
Vijaya Karnataka Web from now onulavi channabasaveshwar jatre
ಇಂದಿನಿಂದ ಉಳವಿ ಶ್ರೀ ಚನ್ನಬಸವೇಶ್ವರ ಜಾತ್ರೆ


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಮಹಾರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಘೋಟ್ನೇಕರ್‌, ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್‌ ಮುಖಂಡ ಪ್ರಶಾಂತ ದೇಶಪಾಂಡೆ, ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ, ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ, ಕಿತ್ತೂರು ಶಾಸಕ ಮಾಹಾಂತೇಶ ದೊಡಗೌಡ್ರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಎಸ್‌.ಎಸ್‌ ನಕುಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್‌ ರೋಶನ್‌, ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷ ಣಾಧಿಕಾರಿ ಅಶೋಕ ಬಾಸರಕೋಡ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸುರೇಶ್‌ ಇಟ್ನಾಳ್‌ ಇರುತ್ತಾರೆ ಎಂದು ತಿಳಿಸಿದರು.

ಸಿದ್ಧತೆ ನಡೆದಿದೆ:

ಟ್ರಸ್ಟ್‌ನ ಉಪಾಧ್ಯಕ್ಷ ಸಂಜಯ ಕಿತ್ತೂರ ಮಾತನಾಡಿ, ''ರಥೋತ್ಸವದ ದಿನ ರಾಜ್ಯದ ನಾನಾ ಭಾಗಗಳಿಂದ 2-3 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ. ಜಾತ್ರೆಗೆ ಬರುವ ಭಕ್ತರಿಗೆ ಉಳವಿಯ ಶಿವತೀರ್ಥದಿಂದ ನೀರು ಪೂರೈಕೆ ಮಾಡಲಾಗುವುದು. ಈ ಬಾರಿ ಶಿವತೀರ್ಥ ಕೆರೆ ತುಂಬಿದ್ದು, ನೀರಿಗೆ ಅಭಾವವಾಗುವ ಸಾಧ್ಯತೆ ಇಲ್ಲ. ಇನ್ನು ಊಟೋಪಚಾರ ವ್ಯವಸ್ಥೆಗೂ ಸಿದ್ಧತೆಗಳು ನಡೆದಿವೆ'' ಎಂದರು.

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಅರ್ಚಕ ಶಂಕರಯ್ಯಾ ಕಲ್ಮಠ, ಸಲಹಾ ಸಮಿತಿ ಸದಸ್ಯ ಗಣಪತಿ ಉಳ್ವೇಕರ ಇತರರು ಇದ್ದರು.

ಕಾವಿಧಾರಿಗಳಿಗೆ ನಿರ್ಬಂಧ

ದೇವಸ್ಥಾನದಿಂದ ಯಾವುದೇ ಕಾವಿಧಾರಿಗಳಿಗೆ ಆಮಂತ್ರಣ ನೀಡಲಾಗಿಲ್ಲ. ಆದರೂ ರಥೋತ್ಸವಕ್ಕೆ ಬರುವವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿಕೊಳ್ಳಲಾಗುವುದು. ಇನ್ನು ಚಿತ್ರದುರ್ಗದ ಮುರುಘಾಮಠದ ಸ್ವಾಮಿಗಳು ಕಳೆದ ಬಾರಿಯಂತೆ ಬಂದು ಯಾವುದೇ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಅವರೇ ಜವಾಬ್ದಾರರು ಎಂದು ಟ್ರಸ್ಟ್‌ನವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ