ಆ್ಯಪ್ನಗರ

31ರೊಳಗೆ ಕಾಮಗಾರಿ ಅನುಮೋದನೆ ಪಡೆಯಿರಿ

ಕಾರವಾರ : ಪಂಚಾಯತ್‌ ರಾಜ್‌ ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಅ.31ರ ಒಳಗೆ ಅನುಮೋದನೆ ಪಡೆಯುವಂತೆ ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Vijaya Karnataka 12 Oct 2019, 5:00 am
ಕಾರವಾರ : ಪಂಚಾಯತ್‌ ರಾಜ್‌ ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಅ.31ರ ಒಳಗೆ ಅನುಮೋದನೆ ಪಡೆಯುವಂತೆ ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Vijaya Karnataka Web get work approved by 31
31ರೊಳಗೆ ಕಾಮಗಾರಿ ಅನುಮೋದನೆ ಪಡೆಯಿರಿ


ಶುಕ್ರವಾರ ನಡೆದ ಜಿಲ್ಲಾಪಂಚಾಯಿತಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಬಹುತೇಕ ಎಲ್ಲಇಲಾಖೆಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಪಂಚಾಯತ್‌ ರಾಜ್‌ ಇಲಾಖೆ ಕಾಮಗಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಅಂದಾಜು ಪಟ್ಟಿ ಸಲ್ಲಿಸಿಬೇಕಿದೆ ಎಂದರು.

ಅಂದಾಜು ಪಟ್ಟಿ ಮಾಡುವುದೇ ವಿಳಂಬವಾದರೆ ಪ್ರಸಕ್ತ ಸಾಲಿನ ಕಾಮಗಾರಿಗಳು ಆರ್ಥಿಕ ವರ್ಷದಲ್ಲಿಮುಗಿಯುವುದು ಕಷ್ಟವಾಗಲಿದೆ. ಅಲ್ಲದೇ ರಸ್ತೆ, ಕುಡಿಯುವ ನೀರಿನ ಕಾಮಗಾರಿಗಳ ಅತಿ ಜರೂರು ಆಗಬೇಕಿರುವುದರಿಂದ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಬೇಕು ಎಂದು ಹೇಳಿದರು.

ಜಿ.ಪಂ. ಸಾಮಾನ್ಯ ಸಭೆಯಲ್ಲಿಅನುಮೋದನೆ ಪಡೆದ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಜಿಪಂ ಸಿಇಒ ಎಂ.ರೋಷನ್‌ ಅವರು, ಎಲ್ಲಅನುಮೋದಿತ ಕ್ರಿಯಾ ಯೋಜನೆಗಳನ್ನು ಅಂದಾಜು ಪಟ್ಟಿ ತಯಾರಿಕೆಗೆ ಸಂಬಂಧಿತ ಎಂಜಿನಿಯರಿಂಗ್‌ ವಿಭಾಗಕ್ಕೆ ಸಲ್ಲಿಸಬೇಕು. ಎಂಜಿನೀರಿಂಗ್‌ ವಿಭಾಗವೂ ಶೀಘ್ರ ಅಂದಾಜು ಪಟ್ಟಿ ತಯಾರಿಸಿ ಅನುಮೋದನೆ ಪಡೆಯಬೇಕು ಎಂದರು.

ಎಲ್ಲಇಲಾಖೆಗಳ ಅನುದಾನದಲ್ಲಿನಿರ್ದಿಷ್ಟ ಶೇಕಡಾವಾರು ಅನುದಾನವನ್ನು ವಿಶೇಷಚೇತನ ಕಲ್ಯಾಣಕ್ಕೆ ಮೀಸಲಿಡಬೇಕೆಂಬ ನಿಯಮವಿದ್ದು, ಪ್ರಸ್ತುತ ಕೇವಲ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ. ಸಮುದಾಯ ಕಾಮಗಾರಿಗಳನ್ನು ತೆಗೆದುಕೊಳ್ಳುವ ಅವಕಾಶವಿದ್ದರೆ ಈ ಸಂಬಂಧ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಲಾಯಿತು.

ಅಲ್ಲದೇ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ನಿಯಮಾವಳಿಯಂತೆ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಪ್ರತಿ ಇಲಾಖೆಯ ಶೇ.15ರಷ್ಟು ಅನುದಾನ ವಿನಿಯೋಗಿಸುವ ಸಂಬಂಧ ನಿಯಮಾನುಸಾರ ಕ್ರಮಕ್ಕೆ ಸಭೆಯಲ್ಲಿಸೂಚಿಸಲಾಯಿತು.

ವಿಶೇಷಚೇತನರ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ಜಿಲ್ಲಾಸರ್ಜನ್‌ ನೇತೃತ್ವದ ಸಮಿತಿಯಿಂದಲೇ ನೀಡಲಾಗುತ್ತಿದೆ. ಅದು ವಾರದಲ್ಲಿಪ್ರತಿ ಗುರುವಾರ ನಡೆಯುವುದರಿಂದ ಜಿಲ್ಲಾಸ್ಪತ್ರೆಯಲ್ಲಿಜನಜಂಗುಳಿ ಆಗಲಿದೆ ಮತ್ತು ವಿಶೇಷಚೇತನರು ದೂರದ ಊರುಗಳಿಂದ ಬರಬೇಕಿರುವುದರಿಂದ ಪರ್ಯಾಯ ಕ್ರಮಗಳ ಬಗ್ಗೆ ಸಂಬಂಧಿಸಿದ ಇಲಾಖೆ ಮುಖ್ಯಸ್ಥರ ಸಲಹೆ ಪಡೆಯಲು ಸಭೆಯಲ್ಲಿತೀರ್ಮಾನಿಸಲಾಯಿತು.

ಕೃಷಿ, ತೋಟಗಾರಿಕೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಕ್ರೀಡಾ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.

ಸಭೆಯಲ್ಲಿಜಿ.ಪಂ. ಉಪಾಧ್ಯಕ್ಷ ಸಂತೋಷ ರೇಣಕೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್‌್ಕ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜಯ ಮಾರುತಿ ಹಣಬರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ