ಆ್ಯಪ್ನಗರ

ಮತ್ತೆ ಗೋಕರ್ಣ ದೇಗುಲ ಹಸ್ತಾಂತರ ಗೊಂದಲ

ಕಾರವಾರ :ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಮಂಗಳವಾರ ಮರಳಿ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಸಲು ಮುಂದಾಗಿದ್ದ ಕುಮಟಾ ಉಪ ವಿಭಾಗಾಧಿಕಾರಿ ಮತ್ತು ತಾಲೂಕು ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆಯಂತೆ ಹಸ್ತಾಂತರಿಸದೆ ವಾಪಸ್ಸಾಗಿದ್ದಾರೆ. ಜಿಲ್ಲಾಡಳಿತದ ಕ್ರಮ ಚರ್ಚೆಗೆ ಗ್ರಾಸವಾಗಿದೆ.

Vijaya Karnataka 10 Oct 2018, 8:48 am
ಕಾರವಾರ :ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಮಂಗಳವಾರ ಮರಳಿ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಸಲು ಮುಂದಾಗಿದ್ದ ಕುಮಟಾ ಉಪ ವಿಭಾಗಾಧಿಕಾರಿ ಮತ್ತು ತಾಲೂಕು ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆಯಂತೆ ಹಸ್ತಾಂತರಿಸದೆ ವಾಪಸ್ಸಾಗಿದ್ದಾರೆ. ಜಿಲ್ಲಾಡಳಿತದ ಕ್ರಮ ಚರ್ಚೆಗೆ ಗ್ರಾಸವಾಗಿದೆ.
Vijaya Karnataka Web gokarna temple confusion again
ಮತ್ತೆ ಗೋಕರ್ಣ ದೇಗುಲ ಹಸ್ತಾಂತರ ಗೊಂದಲ


ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ದೇವಸ್ಥಾನವನ್ನು ಮರಳಿ ಮಠದ ಸುಪರ್ದಿಗೆ ನೀಡುವಂತೆ ಎರಡು ದಿನಗಳ ಹಿಂದೆ ಕುಮಟಾ ಉಪ ವಿಭಾಗಾಧಿಕಾರಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 9.30ರಿಂದ ಉಪ ವಿಭಾಗಾಧಿಕಾರಿ ಪ್ರೀತಿ ಗೆಲ್ಹೋಟ್‌, ತಹಸೀಲ್ದಾರ್‌ ಮೇಘರಾಜ, ಮುಜರಾಯಿ ಇಲಾಖೆಯ ಅಧಿಕಾರಿ ಸುರೇಶ ಮತ್ತಿತರು ಗೋಕರ್ಣಕ್ಕೆ ಬಂದು ಹಸ್ತಾಂತರ ಪ್ರಕ್ರಿಯೆ ಪ್ರಾರಂಭಿಸಿದ್ದರು.

ದೇವಸ್ಥಾನಕ್ಕೆ ಸೇರಿದ ಚಿನ್ನಾಭರಣಗಳನ್ನು ಪರಿಶೀಲಿಸಿ ತೂಕ ಮಾಡುವ ಕಾರ್ಯ ನಡೆದಿತ್ತು. ಈ ಸಂದರ್ಭದಲ್ಲಿ ಜಿಲ್ಲಾಡಳಿತವು ಸ್ಥಳೀಯ ಅಧಿಕಾರಿಗಳಿಗೆ ಹಸ್ತಾಂತರ ಪ್ರಕ್ರಿಯೆ ನಿಲ್ಲಿಸುವಂತೆ ದೂರವಾಣಿ ಮೂಲಕ ನಿರ್ದೇಶಿಸಿದೆ. ಹೀಗಾಗಿ ಉಪ ವಿಭಾಗಾಧಿಕಾರಿಯೂ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಹಸ್ತಾಂತರ ಪ್ರಕ್ರಿಯೆ ನಡೆಸದೇ ವಾಪಸ್ಸಾಗಿದ್ದಾರೆ.

ಏಕೆ ಗೊಂದಲ?


ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯ ಪಡೆಯದೇ ಮಠದ ವಶಕ್ಕೆ ದೇವಸ್ಥಾನವನ್ನು ನೀಡುವಂತೆ ಜಿಲ್ಲಾಡಳಿತ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಅದರಂತೆ ಸ್ಥಳೀಯ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದರು. ಆದರೆ ಕೊನೆಯ ಕ್ಷ ಣದಲ್ಲಿ ಹಸ್ತಾಂತರಕ್ಕೂ ಮೊದಲು ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯ ಪಡೆಯಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಸ್ತಾಂತರವನ್ನು ತಡೆಹಿಡಿದಿದೆ.

ಈ ಕುರಿತು 'ವಿಕ' ಜೊತೆ ಮಾತನಾಡಿದ ಜಿಲ್ಲಾಡಳಿತದ ಅಧಿಕಾರಿಗಳು, ''ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಮುಜರಾಯಿ ಇಲಾಖೆ ಕೇಳಿದೆ. ಇಲಾಖೆಯಿಂದ ನಿರ್ದೇಶನ ಬಾರದ ಹೊರತು ಹಸ್ತಾಂತರ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದ್ದ ಹಸ್ತಾಂತರ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಇಲಾಖೆಯ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ'' ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ