ಕಾರವಾರ: ಯಾವುದೇ ಮನೆ, ಕಟ್ಟಡ ಅಥವಾ ಅಭಿವೃದ್ಧಿ ಕಾರ್ಯಗಳನ್ನ ಮಾಡಲು ಮರಳು ಅತ್ಯಗತ್ಯವಾಗಿದೆ. ಆದರೆ ಕರಾವಳಿ ನಗರಿ ಕಾರವಾರದಲ್ಲಿ ಮರಳು ಸಿಗುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಜನ ಮರಳಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇದರಿಂದಾಗಿ ಅಭಿವೃದ್ದಿ ಚಟುವಟಿಕೆಗಳು ಮರಳು ಸಿಗದೇ ಪರದಾಡುವಂತಾಗಿದ್ದು, ಜನಸಾಮಾನ್ಯರಿಗೂ ಸಹ ಸಾಕಷ್ಟು ಸಮಸ್ಯೆ ಉಂಟಾಗಿದೆ. ಈ ನಿಟ್ಟಿನಲ್ಲಿ ಪರ್ಯಾಯ ಮಾರ್ಗದ ಚಿಂತನೆಯಲ್ಲಿರುವ ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿ ಹೊರತುಪಡಿಸಿ ಒಳನಾಡು ನದಿ ಪ್ರದೇಶ, ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಲಭ್ಯವಿರುವ ಮರಳನ್ನ ತೆಗೆಯಲು ಇರುವ ಸಾಧ್ಯತೆಗಳ ಕುರಿತು ಪರಿಶೀಲಿಸಲು ಮುಂದಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಹಲವೆಡೆ ನಿರ್ಮಾಣ ಕಾಮಗಾರಿಗಳಿಗೆ ಎಂಸ್ಯಾಂಡ್ ಬಳಕೆ ಮಾಡಲಾಗುತ್ತದೆಯಾದ್ರೂ ಕರಾವಳಿ ಪ್ರದೇಶವಾಗಿರುವುದರಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಇದರ ಬಳಕೆ ಸಾಧ್ಯವಿಲ್ಲ. ಹೀಗಾಗಿ ಆದಷ್ಟು ಶೀಘ್ರದಲ್ಲಿ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿ ಹೊರತುಪಡಿಸಿರುವ ಪ್ರದೇಶಗಳಲ್ಲಿ ಮರಳು ದಿಬ್ಬಗಳನ್ನ ಗುರುತಿಸಿ ಮರಳಿನ ಬೇಡಿಕೆ ಪೂರೈಕೆಗೆ ಒದಗಿಸಬೇಕು ಎನ್ನುವ ಆಗ್ರಹ ಸ್ಥಳೀಯರದ್ದಾಗಿದೆ.