ಆ್ಯಪ್ನಗರ

ಸರಕಾರ ಉಳಿವಿಗೆ ಕವಡೆ ಹಾಕಿ ನೋಡಬೇಕು: ಕೇಂದ್ರ ಸಚಿವ ಹೆಗಡೆ

ಕಾರವಾರ :ರಾಜ್ಯ ಸಮ್ಮಿಶ್ರ ಸರಕಾರ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಕವಡೆ ಹಾಕಿ ನೋಡಬೇಕಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ಲೇವಡಿ ಮಾಡಿದ್ದಾರೆ.

Vijaya Karnataka 17 Sep 2018, 5:00 am
ಕಾರವಾರ :ರಾಜ್ಯ ಸಮ್ಮಿಶ್ರ ಸರಕಾರ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಕವಡೆ ಹಾಕಿ ನೋಡಬೇಕಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ಲೇವಡಿ ಮಾಡಿದ್ದಾರೆ.
Vijaya Karnataka Web government should look for a survival union minister hegde
ಸರಕಾರ ಉಳಿವಿಗೆ ಕವಡೆ ಹಾಕಿ ನೋಡಬೇಕು: ಕೇಂದ್ರ ಸಚಿವ ಹೆಗಡೆ


ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಉದ್ಯೋಗ ವಿನಿಮಯ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ರಾಜ್ಯ ಸರಕಾರದ ಭವಿಷ್ಯ ಅನಿಶ್ಚಿತತೆಯಿಂದ ಕೂಡಿದೆ. ಯಾವ ಹೊತ್ತಿನಲ್ಲಿ ಸರಕಾರ ಉರುಳುತ್ತದೆ ಎಂಬುದನ್ನು ಅರಿತುಕೊಳ್ಳಲು ಕವಡೆ ಜ್ಯೋತಿಷ್ಯವೇ ಗತಿ'' ಎಂದು ಕುಟುಕಿದರು.

ಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಚಕ್ರವರ್ತಿ ಸೂಲಿಬೆಲೆ ಅವರ ಸ್ಪರ್ಧೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ''ಅಭ್ಯರ್ಥಿಯನ್ನ ಪಕ್ಷ ದ ವರಿಷ್ಠರು ಆಯ್ಕೆ ಮಾಡುತ್ತಾರೆ. ಪಕ್ಷ ಯಾರನ್ನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ಬದ್ಧನಾಗಿದ್ದೇನೆ'' ಎಂದರು.

ಶಾಸಕಿ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾ ವಕ್ತಾರ ರಾಜೇಶ ನಾಯಕ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ