ಆ್ಯಪ್ನಗರ

ಅರಣ್ಯ ಅತಿಕ್ರಮಣದಾರರಿಗೆ ಕಿರುಕುಳ ಆರೋಪ

ಭಟ್ಕಳ : ಅರಣ್ಯ ಇಲಾಖೆ ಹಾಗೂ ಅವರ ಅಧೀನ ಸಿಬ್ಬಂದಿ, ಅರಣ್ಯ ಅತಿಕ್ರಮಣದಾರರಿಗೆ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆಯ ವತಿಯಿಂದ ಸೋಮವಾರ ಶಿರಸಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 14 Nov 2019, 5:00 am
ಭಟ್ಕಳ : ಅರಣ್ಯ ಇಲಾಖೆ ಹಾಗೂ ಅವರ ಅಧೀನ ಸಿಬ್ಬಂದಿ, ಅರಣ್ಯ ಅತಿಕ್ರಮಣದಾರರಿಗೆ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆಯ ವತಿಯಿಂದ ಸೋಮವಾರ ಶಿರಸಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web harassment of forest trespassers
ಅರಣ್ಯ ಅತಿಕ್ರಮಣದಾರರಿಗೆ ಕಿರುಕುಳ ಆರೋಪ


ತಾಲೂಕಿನಾದ್ಯಂತ ಅರಣ್ಯ ಹಕ್ಕು ಕಾಯ್ದೆಯಡಿ 8,829 ಅರ್ಜಿಗಳು ದಾಖಲಾಗಿದ್ದು, ಅರ್ಜಿಗಳು ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿಪರಿಶೀಲನೆಗೆ ಒಳಪಟ್ಟು ಕಂದಾಯ ಮತ್ತು ಅರಣ್ಯಾಧಿಕಾರಿಗಳ ಸಮಕ್ಷಮ ಜಿಪಿಎಸ್‌ ಪ್ರಕ್ರಿಯೆಯೂ ಮುಗಿದಿದೆ. ಭೂಮಿ ಮಂಜೂರಾತಿ ಪ್ರಕ್ರಿಯೆಯಷ್ಟೇ ಬಾಕಿ ಇರುವ ಹಂತದಲ್ಲಿಅರಣ್ಯಾಧಿಕಾರಿಗಳು ಅತಿಕ್ರಮಣದಾರರ ಸಾಗುವಳಿ ವಹಿವಾಟಿಗೆ ಕಿರುಕುಳ ನೀಡುತ್ತಿದ್ದಾರೆ. ಜಿಪಿಎಸ್‌ ಆಗಿರುವ ಕ್ಷೇತ್ರಕ್ಕೆ ಸಂಬಂಧಿಸಿ ಕರ್ನಾಟಕ ಅರಣ್ಯ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸುತ್ತಿರುವುದು ಖಂಡನಾರ್ಹವಾಗಿದೆ ಎಂದು ಮನವಿಯಲ್ಲಿಉಲ್ಲೇಖಿಸಲಾಗಿದೆ.

ಜಿಲ್ಲಾಅರಣ್ಯಭೂಮಿ ಹಕ್ಕು ಹೋರಾಟ ವೇದಿಕೆಯ ಪ್ರಮುಖರಾದ ಉದಯ ನಾಯ್ಕ, ಇಬ್ರಾಹಿಂ ನಬಿ ಸಾಬ ಸೈಯದ್‌, ಅಬ್ದುಲ್‌ ಖಾದರ್‌ ಮರ್ದಾನ ಸಾಬ್‌ ಚೆನ್ನಾಪುರ, ಮಂಜುನಾಥ ಕರಿಯಪ್ಪ ದಳ್ಳಿನಕೇರಿ ಮೊದಲಾದವರು ಉಪಸ್ಥಿತರಿದ್ದರು. ಶಿರಸಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಪ್ರದೀಪ ಮನವಿ ಸ್ವೀಕರಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ