ಆ್ಯಪ್ನಗರ

ಕೊರೊನಾ ನಡುವೆಯೇ ಉತ್ತರಕನ್ನಡದಲ್ಲಿ ಡೆಂಗ್ಯೂ ಪತ್ತೆ, ಆತಂಕದಲ್ಲಿ ಸಾರ್ವಜನಿಕರು

ಕೊರೊನಾ ನಡುವೆಯೇ ಉತ್ತರ ಕನ್ನಡದಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಲಾಕ್‌ಡೌನ್‌ನಿಂದ ಹಡಗುಗಳು ಬಂದರಿನಲ್ಲಿಯೇ ಲಂಗರು ಹಾಕಿರುವುದರಿಂದ ಕಾರ್ಮಿಕರು ಹಡಗುಗಳಲ್ಲಿಯೇ ವಾಸಿಸುತ್ತಿದ್ದಾರೆ. ಇದರಿಂದ ಸೊಳ್ಳೆಗಳು ಹೆಚ್ಚಾಗಿ ಡೆಂಗ್ಯೂ ಕಾಣಿಸಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Vijaya Karnataka Web 6 Apr 2020, 7:35 pm
ಕಾರವಾರ: ಕೊರೊನಾ ಆತಂಕದ ನಡುವೆಯೇ ನಗರದ ಬೈತಖೋಲ್ ಮೀನುಗಾರಿಕೆ ಬಂದರು ಪ್ರದೇಶದಲ್ಲಿ ವ್ಯಕ್ತಿಯೊಬ್ಬನಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ನಡೆಸುವ ನೂರಾರು ಹಡಗುಗಳು ಬಂದರಿನಲ್ಲೇ ಲಂಗರು ಹಾಕಿವೆ.
Vijaya Karnataka Web dengue-toi.


ಲಾಕ್‌ಡೌನ್ ಹಿನ್ನೆಲೆ ಬೋಟ್‌ನ ಕಾರ್ಮಿಕರು ಊರಿಗೆ ತೆರಳಲಾಗದೇ ಹಡಗುಗಳಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಹಡಗಿನಲ್ಲಿ ಕೆಲಸ ಮಾಡುವ ಒರಿಸ್ಸಾ ಮೂಲದ ಕಾರ್ಮಿಕನಿಗೆ ಡೆಂಗ್ಯೂ ತಗುಲಿದೆ. ಬೋಟುಗಳು ಒಂದೇ ಕಡೆಗಳಲ್ಲಿ ನಿಂತುಕೊಂಡಿರುವುದರಿಂದ ಸಮುದ್ರದ ಅಲೆಗಳ ಹೋಯ್ದಾಟದಲ್ಲಿ ನೀರು ಹಡಗಿನೊಳಗೆ ಸಂಗ್ರಹವಾಗುತ್ತಿದೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಡೆಂಗ್ಯೂ ಹರಡುತ್ತಿರುವ ಅನುಮಾನ ವ್ಯಕ್ತವಾಗಿದೆ.

ಆರೋಗ್ಯ ಇಲಾಖೆ ಸಿಬ್ಬಂದಿ ಬಂದರಿಗೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬೋಟಿನ ಕಾರ್ಮಿಕರಿಗೆ ಹಡಗು ಮಾಲೀಕರ ಯೂನಿಯನ್ ಕಚೇರಿ ಹಾಗೂ ಹಾಲ್‌ಗಳಲ್ಲಿ ಉಳಿದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಕ್ರಮವನ್ನು ಜಿಲ್ಲಾಡಳಿತ ತೆಗೆದುಕೊಳ್ಳುತ್ತಿದೆ.

ಕ್ವಾರಂಟೈನ್‌ಗೆ ಕಳಿಸಲು ಪೊಲೀಸರಿಂದ ಪಾಲಕರಿಗೆ ಒತ್ತಡ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ