ಹೃದಯಾಘಾತ: ಸೆಕ್ಟರ್ ಅಧಿಕಾರಿ ಸಾವು
ಕಾರವಾರ : ಚುನಾವಣಾ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ನಿಧನರಾದ ಘಟನೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಂಕೋಲಾ ತಾಲೂಕಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
Vijaya Karnataka 21 Apr 2019, 5:00 am
ಕಾರವಾರ : ಚುನಾವಣಾ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ನಿಧನರಾದ ಘಟನೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಂಕೋಲಾ ತಾಲೂಕಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಅಂಕೋಲಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕಾಂತ ಎಂ. ಮಾಳ್ಸೇಕರ್ (52) ಎಂಬುವರೇ ಮೃತರು. ಇವರು ಲೋಕಸಭಾ ಚುನಾವಣೆಗೆ ಅಂಕೋಲಾ ತಾಲೂಕಿನ ಸೆಕ್ಟರ್ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದರು. ಶುಕ್ರವಾರ ರಾತ್ರಿ 10 ಗಂಟೆಯ ಸುಮಾರಿಗೆ ತಾಲೂಕಿನ ಗ್ರಾಮೀಣ ಭಾಗವೊಂದರಲ್ಲಿ ಅಕ್ರಮ ಮದ್ಯ ಸಾಗಾಟವಾಗುತ್ತಿರುವ ಕುರಿತು ಫೋನ್ನಲ್ಲಿ ಮಾಹಿತಿ ಬಂದಿದ್ದ ಹಿನ್ನೆಲೆಯಲ್ಲಿ ರವಿಕಾಂತ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಅವರ ಜೀಪಿನ ಚಾಲಕ ತಕ್ಷಣ ಅವರನ್ನು ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ರವಿಕಾಂತ ಮೃತಪಟ್ಟಿದ್ದಾರೆ.
ಅಂಕೋಲಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕಾಂತ ಎಂ. ಮಾಳ್ಸೇಕರ್ (52) ಎಂಬುವರೇ ಮೃತರು. ಇವರು ಲೋಕಸಭಾ ಚುನಾವಣೆಗೆ ಅಂಕೋಲಾ ತಾಲೂಕಿನ ಸೆಕ್ಟರ್ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದರು. ಶುಕ್ರವಾರ ರಾತ್ರಿ 10 ಗಂಟೆಯ ಸುಮಾರಿಗೆ ತಾಲೂಕಿನ ಗ್ರಾಮೀಣ ಭಾಗವೊಂದರಲ್ಲಿ ಅಕ್ರಮ ಮದ್ಯ ಸಾಗಾಟವಾಗುತ್ತಿರುವ ಕುರಿತು ಫೋನ್ನಲ್ಲಿ ಮಾಹಿತಿ ಬಂದಿದ್ದ ಹಿನ್ನೆಲೆಯಲ್ಲಿ ರವಿಕಾಂತ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಅವರ ಜೀಪಿನ ಚಾಲಕ ತಕ್ಷಣ ಅವರನ್ನು ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ರವಿಕಾಂತ ಮೃತಪಟ್ಟಿದ್ದಾರೆ.