ಆ್ಯಪ್ನಗರ

ಉತ್ತರ ಕನ್ನಡದಲ್ಲಿ ಅಕಾಲಿಕ ಮಳೆಗೆ ಇಲ್ಲ ಕೊನೆ: ನೀರು ಪಾಲಾಯ್ತು ಕೊಯ್ಲು ಮಾಡಿದ್ದ ಭತ್ತದ ತೆನೆ

ಮಳೆ ಕಡಿಮೆಯಾದ ಕಾರಣ ನೀರಿನಲ್ಲಿರುವ ಪೈರು ರಕ್ಷಣೆಗೆ ಮುಂದಾಗಿರುವ ರೈತರು, ಅವುಗಳನ್ನು ನೀರಿನಿಂದ ಮೇಲೆತ್ತಿ ಒಣಗಿಸಲು ಹರಸಾಹಸ ಪಡುತ್ತಿದ್ದಾರೆ. ಕೈಗೆ ಬಂದ ಬೆಳೆ ಕೊನೆ ಗಳಿಗೆಯಲ್ಲಿ ನೀರು ಪಾಲಾಗಿ ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾಗಿದೆ.

Vijaya Karnataka Web 15 Nov 2021, 12:38 pm
ಕಾರವಾರ: ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಗದ್ದೆಯಲ್ಲಿ ಕೊಯ್ಲು ಮಾಡಿಟ್ಟಿದ್ದ ಭತ್ತದ ಬೆಳೆ ಸಂಪೂರ್ಣ ಮಳೆ ನೀರಿಗೆ ಸಿಕ್ಕಿ ಹಾನಿಯಾಗಿ ರೈತರಿಗೆ ಸಂಕಷ್ಟ ಎದುರಾಗಿದೆ.
Vijaya Karnataka Web ಭತ್ತದ ತೆನೆ
ಭತ್ತದ ತೆನೆ


ಉತ್ತರ ಕನ್ನಡ ಅಂಕೋಲಾ, ಹೊನ್ನಾವರ, ಕುಮಟಾ ಭಾಗದಲ್ಲಿ ಭತ್ತದ ಬೆಳೆ ಬೆಳೆದು ನಿಂತಿದ್ದು, ಬಹುತೇಕರು ಕೊಯ್ಲು ಸಹ ಪ್ರಾರಂಭಿಸಿದ್ದರು. ಆದರೆ ಭಾನುವಾರ ಸುರಿದ ಮಳೆಯಿಂದಾಗಿ ಎಲ್ಲವೂ ನೀರು ಪಾಲಾಗಿದೆ.

ಪೆಟ್ರೋಲ್‌ ರೇಟ್‌ ದುಬಾರಿ: ಸರಕಾರದಿಂದ ಸ್ಕೂಟರ್‌ ಪಡೆದ ಅಂಗವಿಕಲರಿಗೆ ಗಾಯದ ಮೇಲೆ ಬರೆ

ಗೋಕರ್ಣದ ಗಂಗೆಕೊಳ್ಳದಲ್ಲಿ ರೈತರೊಬ್ಬರು ಎರಡು ದಿನ ಕೊಯ್ಲು ಮಾಡಿ ಗದ್ದೆಯಲ್ಲಿ ಬಿಟ್ಟಿದ್ದ ಭತ್ತದ ಪೈರು ಸಂಪೂರ್ಣ ಮಳೆ ನೀರಿನಲ್ಲಿ ಮುಳುಗಿ ತೇಲಲಾರಂಭಿಸಿದೆ. ಇದೀಗ ಮಳೆ ಕಡಿಮೆಯಾದ ಕಾರಣ ನೀರಿನಲ್ಲಿರುವ ಪೈರು ರಕ್ಷಣೆಗೆ ಮುಂದಾಗಿರುವ ರೈತರು, ಅವುಗಳನ್ನು ನೀರಿನಿಂದ ಮೇಲೆತ್ತಿ ಒಣಗಿಸಲು ಹರಸಾಹಸ ಪಡುತ್ತಿದ್ದಾರೆ. ಕೈಗೆ ಬಂದ ಬೆಳೆ ಕೊನೆ ಗಳಿಗೆಯಲ್ಲಿ ನೀರು ಪಾಲಾಗಿ ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾಗಿದ್ದು, ಸರಕಾರ ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಪರವಾನಗಿ ಇಲ್ಲದೇ ಆಂಧ್ರಕ್ಕೆ ಕಲ್ಲು ಸಾಗಾಟ: ಹೊನ್ನಾವರದಲ್ಲಿ ಲಾರಿಗಳನ್ನು ತಡೆದ ಸ್ಥಳೀಯರು

ಈ ಅಕಾಲಿಕ ಮಳೆ ಭಾನುವಾರ ಮಧ್ಯಾಹ್ನದಿಂದ ಸೋಮವಾರ ಮುಂಜಾನೆಯವರೆಗೂ ಕೂಡ ಮಲೆನಾಡು ಭಾಗದ ಶಿರಸಿ, ಸಿದ್ದಾಪುರ ಸೇರಿದಂತೆ ಹಲವೆಡೆ ಸುರಿದಿದೆ. ಇದು ಅಡಕೆ ಕೊಯ್ಲು ಹಾಗೂ ಒಣಗಿಸಲು ಸಮಸ್ಯೆ ತಂದೊಡ್ಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ