ಆ್ಯಪ್ನಗರ

ನಗರಸಭೆ ಪೌರಾಯುಕ್ತರ ವಿರುದ್ಧದ ಭ್ರಷ್ಟಾಚಾರ ದೂರಿನ ತನಿಖೆಗೆ ಹೈಕೋರ್ಟ್‌ ಆದೇಶ

ಸಾಮಾಜಿಕ ಕಾರ್ಯಕರ್ತ ಅಂಥೋನ್‌ ಫರ್ನಾಂಡಿಸ್‌ ಅವರು ಶನಿವಾರ ಪತ್ರಿಕಾಗೋಷ್ಠಿ ನಡೆಸಿ ನಗರಸಭೆ ಪೌರಾಯುಕ್ತ ಆರ್‌.ಪಿ ನಾಯ್ಕ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಕುರಿತು ದಾಖಲೆ ಬಿಡುಗಡೆ ಮಾಡಿದರು. ಪ್ರಕರಣ ಕುರಿತು ವಿವರಣೆ ನೀಡಿದ ಅವರು, ನಾಯ್ಕ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಮಾಡಿದ ಎಲ್ಲ ಕೆಲಸಗಳ ಬಗ್ಗೆ 6 ವಾರಗಳಲ್ಲಿ ವರದಿ ನೀಡುವಂತೆ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಸದ್ಯದಲ್ಲಿಯೇ ತನಿಖಾ ತಂಡ ಜಿಲ್ಲೆಗೆ ಬರಲಿದೆ ಎಂದು ಮಾಹಿತಿ ನೀಡಿದರು.

Vijaya Karnataka 11 Sep 2022, 10:39 pm
ಕಾರವಾರ: ನಗರಸಭೆ ಪೌರಾಯುಕ್ತ ಆರ್‌.ಪಿ ನಾಯ್ಕ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎನ್ನುವ ದೂರಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಿಂದ ಲೆಕ್ಕಪರಿಶೋಧನೆ ನಡೆಸಲು ಹೈಕೋರ್ಟ್‌ ನಿರ್ದೇಶನ ನೀಡಿದೆ.
Vijaya Karnataka Web Karnataka_high_court
Karnataka high court


ದೂರುದಾರ, ಸಾಮಾಜಿಕ ಕಾರ್ಯಕರ್ತ ಅಂಥೋನ್‌ ಫರ್ನಾಂಡಿಸ್‌ ಅವರು ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ದಾಖಲೆ ಬಿಡುಗಡೆ ಮಾಡಿದರು. ಪ್ರಕರಣ ಕುರಿತು ವಿವರಣೆ ನೀಡಿದ ಅವರು, ನಾಯ್ಕ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಮಾಡಿದ ಎಲ್ಲ ಕೆಲಸಗಳ ಬಗ್ಗೆ 6 ವಾರಗಳಲ್ಲಿ ವರದಿ ನೀಡುವಂತೆ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಸದ್ಯದಲ್ಲಿಯೇ ತನಿಖಾ ತಂಡ ಜಿಲ್ಲೆಗೆ ಬರಲಿದೆ ಎಂದು ಮಾಹಿತಿ ನೀಡಿದರು.
ಆದಿಕೇಶವುಲು ಆಪ್ತನ ಸಾವು ಪ್ರಕರಣ: ಡಿ.ಎ ಶ್ರೀನಿವಾಸ್ ಸೇರಿ ನಾಲ್ವರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ದೂರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕಳೆದ ವರ್ಷ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು. ಕಾರವಾರ ನಗರಸಭೆಯ ಕಾಮಗಾರಿಗಳ ಕಡತದಲ್ಲಿ ದೋಷಗಳು ಮೇಲ್ನೋಟಕ್ಕೆ ಕಂಡು ಬಂದಿವೆ. ಕಡತಗಳನ್ನು ನುರಿತ ಲೆಕ್ಕ ತಪಾಸಣಾ ತಂಡದಿಂದ ಪರಿಶೀಲನೆ ಕೈಗೊಳ್ಳಬೇಕು ಎಂದು ಸಮಿತಿ ಅಭಿಪ್ರಾಯಪಟ್ಟಿತ್ತು.

ಈ ಕಾರಣಕ್ಕೆ ರಾಜ್ಯ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧ್ಯ ಮತ್ತು ನ್ಯಾಯಮೂರ್ತಿ ವಿಶ್ವಜೀತ ಶೆಟ್ಟಿ ಅವರಿದ್ದ ನ್ಯಾಯಪೀಠ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾಡಳಿತ ಸಲ್ಲಿಸಿದ್ದ ವರದಿ ಆಧರಿಸಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ನೇತೃತ್ವದ ತಂಡದೊಂದಿಗೆ ಉನ್ನತ ತನಿಖೆ ನಡೆಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ ಎಂದರು. ದತ್ತಾನಂದ ಸಾಳಸ್ಕರ, ಗಣರಾಜ ದುರ್ಗೇಕರ ಮತ್ತಿತರರು ಹಾಜರಿದ್ದರು.
ಆರ್‌.ಪಿ. ನಾಯ್ಕ ಅವರ ಅಧಿಕಾರ ಅವಧಿಯಲ್ಲಿ ಆಗಿರುವ ಕಾಮಗಾರಿಗಳ ತನಿಖೆಗೆ ಹೈಕೋರ್ಟ್‌ ಉನ್ನತ ಮಟ್ಟದ ಸಮಿತಿ ನೇಮಿಸಿರುವುದು ಹೋರಾಟಕ್ಕೆ ಆರಂಭಿಕ ಗೆಲುವು ಸಿಕ್ಕಂತಾಗಿದೆ. ಅಲ್ಲದೆ, ನಾಯ್ಕ ಅವರು ನನ್ನ ಮೇಲೆ ಹಾಕಿದ್ದ ಮಾನಹಾನಿ ಕೇಸ್‌ ಅನ್ನು ಜಿಲ್ಲಾ ಮುಖ್ಯ ನ್ಯಾಯಾಲಯ ವಜಾ ಮಾಡಿದೆ.
ಅಂಥೋನ್‌ ಫರ್ನಾಂಡಿಸ್‌, ಸಾಮಾಜಕ ಹೋರಾಟಗಾರ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ