ಆ್ಯಪ್ನಗರ

ಮನೆ ಮನೆ ಪರಿಶೀಲನೆ

ಕಾರವಾರ: ಜಿಲ್ಲೆಯಲ್ಲಿಮನೆ ಮನೆ ಪರಿಶೀಲನೆ ಕಾರ್ಯ ಯಶಸ್ವಿಯಾಗಿ ನಡೆದಿದ್ದು ಮುಂದಿನ ವಾರ ಎರಡನೇ ಹಂತದಲ್ಲಿಮತ್ತೊಮ್ಮೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.

Vijaya Karnataka 1 Apr 2020, 5:00 am
ಕಾರವಾರ: ಜಿಲ್ಲೆಯಲ್ಲಿಮನೆ ಮನೆ ಪರಿಶೀಲನೆ ಕಾರ್ಯ ಯಶಸ್ವಿಯಾಗಿ ನಡೆದಿದ್ದು ಮುಂದಿನ ವಾರ ಎರಡನೇ ಹಂತದಲ್ಲಿಮತ್ತೊಮ್ಮೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
Vijaya Karnataka Web home home inspection
ಮನೆ ಮನೆ ಪರಿಶೀಲನೆ


ಹೊರದೇಶ, ರಾಜ್ಯ ಮತ್ತು ಹೊರಜಿಲ್ಲೆಗಳಿಂದ ಬಂದವರು , ಯಾವುದೇ ರೀತಿಯ ಅನಾರೋಗ್ಯಕ್ಕೆ ಒಳಗಾದವರ ಮಾಹಿತಿಯನ್ನು ಜಿಲ್ಲಾಡಳಿತ ಕಲೆಹಾಕುತ್ತಿದೆ. ಜಿಲ್ಲೆಯ ಪ್ರತಿ ಮನೆಗೂಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪರಿಶೀಲನೆ ಕಾರ್ಯದಲ್ಲಿತೊಡಗಿಕೊಂಡಿದ್ದಾರೆ. ಪರಿಶೀಲನೆಯಿಂದಾಗಿ ನಿಖರವಾದ ಮಾಹಿತಿಗಳು ಜಿಲ್ಲಾಡಳಿತಕ್ಕೆ ಲಭ್ಯವಾಗುತ್ತಿದೆ. ಇದರಿಂದ ಕೊರೊನಾವನ್ನು ಯಶಸ್ವಿಯಾಗಿ ನಿಯಂತ್ರಿಸಲು ಸಾಧ್ಯವಾಗಲಿದೆ. ಏ.5ರ ಸುಮಾರಿಗೆ ಜಿಲ್ಲೆಯಲ್ಲಿಬಹಳಷ್ಟು ಜನರ 14 ದಿನದ ನಿಗಾವಣೆ ಅವಧಿ ಮುಗಿಯಲಿದೆ.ಆ ಬಳಿಕ ಇನ್ನೊಮ್ಮೆ ಪರಿಶೀಲನೆ ಕಾರ್ಯ ನಡೆಸುವ ಯೋಜನೆ ಇದೆ ಎಂದು ಡಿಸಿ ಡಾ. ಹರೀಶಕುಮಾರ ಕೆ. ಅವರು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ