ಆ್ಯಪ್ನಗರ

ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ

ಹಳಿಯಾಳ : ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಮೂಲಕ ಅವರಿಗೆ ಉತ್ತಮ ಶಿಕ್ಷ ಣಕ್ಕಾಗಿ ಪ್ರೋತ್ಸಾಹ ನೀಡುವುದು ಅವಶ್ಯ. ವಿ.ಆರ್‌.ದೇಶಪಾಂಡೆ ಮೆಮೋರಿಯಲ್‌ ಟ್ರಸ್ಟ್‌ ವತಿಯಿಂದ ಸಂಸ್ಥಾಪಕರ ದಿನದಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ನಗದು ಬಹುಮಾನ ನೀಡಿ ಗೌರವಿಸುವ ಪದ್ಧತಿ ಈ ವರ್ಷವೂ ಮುಂದುವರೆಯಲಿದೆ ಎಂದು ವಿ.ಆರ್‌.ಡಿ.ಎಂ.ಟ್ರಸ್ಟ್‌ ಆಡಳಿತಾಧಿಕಾರಿ ಪ್ರಕಾಶ ಪ್ರಭು ಹೇಳಿದರು.

Vijaya Karnataka 4 May 2019, 5:00 am
ಹಳಿಯಾಳ : ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಮೂಲಕ ಅವರಿಗೆ ಉತ್ತಮ ಶಿಕ್ಷ ಣಕ್ಕಾಗಿ ಪ್ರೋತ್ಸಾಹ ನೀಡುವುದು ಅವಶ್ಯ. ವಿ.ಆರ್‌.ದೇಶಪಾಂಡೆ ಮೆಮೋರಿಯಲ್‌ ಟ್ರಸ್ಟ್‌ ವತಿಯಿಂದ ಸಂಸ್ಥಾಪಕರ ದಿನದಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ನಗದು ಬಹುಮಾನ ನೀಡಿ ಗೌರವಿಸುವ ಪದ್ಧತಿ ಈ ವರ್ಷವೂ ಮುಂದುವರೆಯಲಿದೆ ಎಂದು ವಿ.ಆರ್‌.ಡಿ.ಎಂ.ಟ್ರಸ್ಟ್‌ ಆಡಳಿತಾಧಿಕಾರಿ ಪ್ರಕಾಶ ಪ್ರಭು ಹೇಳಿದರು.
Vijaya Karnataka Web honored by highly scoring students
ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ


ಹಳಿಯಾಳ ತಾಲೂಕಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 614 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದ ಇಲ್ಲಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಪುಷ್ಪಲತಾ ಅಶೋಕ ಚನ್ನಬಸಣ್ಣವರ ಅವರ ಮನೆಗೆ ತೆರಳಿ ಅವರ ಪೋಷಕರ ಸಮೇತ ವಿದ್ಯಾರ್ಥಿನಿಯನ್ನು ಸನ್ಮಾನಿಸಿ 5 ಸಾವಿರ ರೂ. ನಗದು ಹಾಗೂ ಪ್ರಮಾಣ ಪತ್ರವನ್ನು ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷ ತಾಲೂಕು ಸೇರಿದಂತೆ ಜಿಲ್ಲೆಯ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪಟ್ಟಣದಲ್ಲಿ ನಡೆಯುವ ಸಮಾರಂಭದಲ್ಲಿ ಗೌರವಿಸುವುದರ ಜತೆಗೆ ಮುಂದಿನ ಭವಿಷ್ಯದಲ್ಲಿ ಅವರಿಗೆ ಮಾರ್ಗದರ್ಶನ ಮಾಡುವ ಕೆಲಸವನ್ನು ಟ್ರಸ್ಟ್‌ದಿಂದ ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ಅಲ್ಲದೇ ಪ್ರತಿ ವರ್ಷ ಪರೀಕ್ಷೆಯ ಮುನ್ನ ಮನೋಶಾಸ್ತ್ರಜ್ಞರನ್ನು ಆಹ್ವಾನಿಸಿ ಮುಕ್ತ ಚರ್ಚೆ ಮತ್ತು ಸಂವಾದ ನಡೆಸುವ ಮೂಲಕ ಪರೀಕ್ಷೆಯ ಭಯವನ್ನು ಸಹ ನಿವಾರಿಸುವ ಯತ್ನ ಮಾಡಲಾಗುತ್ತಿದೆ ಎಂದರು.

ಶ್ರೀಪಾದ ಮಾನಗೆ, ವಿವೇಕ ಹೆಗಡೆ ಮತ್ತು ದೇಶಪಾಂಡೆ ಖಾಸಗಿ ಐಟಿಐ ಪ್ರಾಶುಂಪಾಲ ದಿನೇಶ ನಾಯ್ಕ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ