ಆ್ಯಪ್ನಗರ

ದುರ್ಗಾಂಬಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

ಕುಮಟಾ : ತಾಲೂಕಿನ ದೀವಗಿಯಲ್ಲಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮುರೂರು ವಲಯದ ಅಂತ್ರವಳ್ಳಿ ಒಕ್ಕೂಟದ ಶ್ರೀ ದುರ್ಗಾಂಬಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಹಾಗೂ ಸಂಸ್ಕೃತಿ ಮತ್ತು ಸಂಸ್ಕಾರದ ಕುರಿತು ಮಹಿಳಾ ವಿಚಾರ ಗೋಷ್ಠಿ ನಡೆಯಿತು.

Vijaya Karnataka 23 Nov 2019, 5:00 am
ಕುಮಟಾ : ತಾಲೂಕಿನ ದೀವಗಿಯಲ್ಲಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮುರೂರು ವಲಯದ ಅಂತ್ರವಳ್ಳಿ ಒಕ್ಕೂಟದ ಶ್ರೀ ದುರ್ಗಾಂಬಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಹಾಗೂ ಸಂಸ್ಕೃತಿ ಮತ್ತು ಸಂಸ್ಕಾರದ ಕುರಿತು ಮಹಿಳಾ ವಿಚಾರ ಗೋಷ್ಠಿ ನಡೆಯಿತು.
Vijaya Karnataka Web inauguration of durgamba knowledge development center
ದುರ್ಗಾಂಬಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ


ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ದೀವಗಿಯ ಚೇತನ ಸೇವಾ ಸಂಸ್ಥೆಯ ಅಧ್ಯಕ್ಷ ಆರ್‌.ಕೆ. ಅಂಬಿಗ ಸಂಸ್ಕೃತಿ ಮತ್ತು ಸಂಸ್ಕಾರಗಳ ಉಗಮ ಸ್ಥಾನ ನಮ್ಮ ಪವಿತ್ರವಾದ ಭಾರತ. ವಿಶ್ವದಾದ್ಯಂತ ಸರ್ವ ಮಾನವ ಕುಲಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಪರಿಚಯಿಸಿದ ಹೆಗ್ಗಳಿಕೆ ನಮ್ಮದು ಎಂದರು. ಗ್ರಾ.ಪಂ. ಸದಸ್ಯೆ ಸುಮತಿ ಪಿ ಗಾಂವ್ಕರ್‌ ಕಾರ್ಯಕ್ರಮ ಉದ್ಘಾಟಿಸಿ ಯಶಸ್ಸಿಗೆ ಶುಭ ಹಾರೈಸಿದರು. ಒಕ್ಕೂಟದ ಅಧ್ಯಕ್ಷೆ ಶೋಭಾ ವಿ ಅಂಬಿಗ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯೋಜನೆಯ ಜಿಲ್ಲಾನಿರ್ದೇಶಕ ಶಂಕರ ಶೆಟ್ಟಿ ಮಾತನಾಡಿ, ಮಹಿಳೆಯರ ಸಬಲೀಕರಣ ಹಾಗೂ ಉದ್ಯೋಗಾವಕಾಶಕ್ಕೆ ಬೇಕಾದ ಪೂರಕ ತರಬೇತಿ ನೀಡುವುದೇ ಜ್ಞಾನ ವಿಕಾಸ ಕೇಂದ್ರದ ಮುಖ್ಯ ಉದ್ದೇಶ ಆಗಿದೆ ಎಂದು ಹೇಳಿದರು.

ಯೋಜನಾಧಿಕಾರಿ ನಾಗರಾಜ ನಾಯ್ಕ, ಒಕ್ಕೂಟದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಮಾಲತಿ ಹೆಗಡೆ ಉಪಸ್ಥಿತರಿದ್ದರು. ಮೇಲ್ವಿಚಾರಕ ಜನಾರ್ಧನ ಸ್ವಾಗತಿಸಿದರು. ಸಮನ್ವಯಾಧಿಕಾರಿ ಆಶಾಚಂದ್ರ ನಿರೂಪಿಸಿದರು. ಸೇವಾ ಪ್ರತಿನಿಧಿ ಮಂಗಲಾ ಎಸ್‌ ದೇಶಭಂಡಾರಿ ವಂದಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ