ಆ್ಯಪ್ನಗರ

ಕರಾವಳಿಯಲ್ಲಿ ಎಡೆಬಿಡದ ಮಳೆ

ಕಾರವಾರ : ಜಿಲ್ಲೆಯ ಕರಾವಳಿ ಹಾಗೂ ಘಟದ ಮೇಲ್ಬಾಗದ ಪ್ರದೇಶದಲ್ಲಿ ಶುಕ್ರವಾರ ಎಡೆಬಿಡದೆ ಮಳೆ ಸುರಿದಿದ್ದು, ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

Vijaya Karnataka 29 Jun 2019, 5:00 am
ಕಾರವಾರ : ಜಿಲ್ಲೆಯ ಕರಾವಳಿ ಹಾಗೂ ಘಟದ ಮೇಲ್ಬಾಗದ ಪ್ರದೇಶದಲ್ಲಿ ಶುಕ್ರವಾರ ಎಡೆಬಿಡದೆ ಮಳೆ ಸುರಿದಿದ್ದು, ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
Vijaya Karnataka Web incessant rain along the coast
ಕರಾವಳಿಯಲ್ಲಿ ಎಡೆಬಿಡದ ಮಳೆ


ಕಾರವಾರದಲ್ಲಿ ಗುರುವಾರ ಬೆಳಗ್ಗೆಯಿಂದ ಶುರುವಾದ ಮಳೆ ಶುಕ್ರವಾರ ಮಧ್ಯಾಹ್ನದವರೆಗೆ ಸತತವಾಗಿ ಸುರಿಯಿತು. ಇದರಿಂದ ನಗರದ ನ್ಯೂ ಕೆಎಚ್‌ಬಿ ಕಾಲೋನಿ, ಕಾಜುಬಾಗ ಮೊದಲಾದೆಡೆ ನೀರು ತುಂಬಿಕೊಂಡು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಯಿತು.

ಹಳಿಯಾಳದ ದೇವಿಕೇರಿಯ ಅಂಚಿನಲ್ಲಿರುವ ಕಸಬಾಗಲ್ಲಿ ಮತ್ತು ಚೌಕಿಮಠ ಪ್ರದೇಶದಲ್ಲಿಯ ಕೆಲ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ನಿವಾಸಿಗಳು ಕಂಗಾಲಾದರು.

ಅಂಕೋಲಾ, ಹೊನ್ನಾವರ, ಶಿರಸಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿಯೂ ಶುಕ್ರವಾರ ಸುರಿದ ಮಳೆ ಜನರಲ್ಲಿ ಸಮಾಧಾನ ಮೂಡಿಸಿದೆ. ಮುಂಗಾರು ಹಂಗಾಮು ಆರಂಭವಾಗಿ ತಿಂಗಳು ಕಳೆಯುತ್ತಾ ಬಂದರೂ ಈವರೆಗೂ ಮಳೆ ಸಮರ್ಪಕವಾಗಿ ಬೀಳದೇ ಕಂಗಾಲಾಗಿದ್ದ ಜನರಿಗೆ ಕೊಂಚ ನೆಮ್ಮದಿ ಮೂಡಿಸಿದೆ. ರೈತರಲ್ಲಿ ಆಶಾದಾಯಕ ನಿರೀಕ್ಷೆ ಮೂಡಿದೆ.

ತುಂತುರು ಮಳೆ: ಹುಬ್ಬಳ್ಳಿ ಧಾರವಾಡ ಸೇರಿದಂತೆ ಹಾವೇರಿ ಹಾಗೂ ಗದಗ ಜಿಲ್ಲೆಯ ವಿವಿಧೆಡೆ ಶುಕ್ರವಾರ ತುಂತುರು ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿದೆ. ಕೃಷಿ ಚಟುವಟಿಕೆ ಚುರುಕು ಪಡೆದಿವೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ