ಆ್ಯಪ್ನಗರ

ಎನ್ನೆಸ್ಸೆಸ್‌ ನಿಂದ ಸೇವಾ ಮನೋಭಾವ ವೃದ್ಧಿ

ಹೊನ್ನಾವರ : ತಾಲೂಕಿನ ಮಂಕಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌.ಎಸ್‌.ಎಸ್‌ ವಾರ್ಷಿಕ ವಿಶೇಷ ಶಿಬಿರ ಮುಗಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

Vijaya Karnataka 5 Mar 2019, 5:00 am
ಹೊನ್ನಾವರ : ತಾಲೂಕಿನ ಮಂಕಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌.ಎಸ್‌.ಎಸ್‌ ವಾರ್ಷಿಕ ವಿಶೇಷ ಶಿಬಿರ ಮುಗಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
Vijaya Karnataka Web increase service attitude from nss
ಎನ್ನೆಸ್ಸೆಸ್‌ ನಿಂದ ಸೇವಾ ಮನೋಭಾವ ವೃದ್ಧಿ


ಕೆಳಗಿನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಿ ಮಾಬ್ಲು ಗೌಡ ಶಿಬಿರ ಉದ್ಘಾಟಿಸಿ ಮಾತನಾಡಿ, ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುತ್ತದೆ. ಶಿಬಿರದಲ್ಲಿ ಕಲಿತ ಶಿಸ್ತು, ಸಂಯಮ, ವಿಶ್ವಾಸ, ಸೇವಾಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷ ತೆ ವಹಿಸಿದ್ದ ಪ್ರಾಧ್ಯಾಪಕ ಮಾದೇಶ ಮಾತನಾಡಿ, ಯುವ ಶಕ್ತಿಯನ್ನು ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಲು ಎನ್‌.ಎಸ್‌.ಎಸ್‌ ಅತ್ಯುತ್ತಮ ಯೋಜನೆಯಾಗಿದೆ. ಈ ವಿಶೇಷ ಶಿಬಿರಗಳ ಮೂಲಕ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಬಹುದಾಗಿದೆ ಎಂದರು. ವೇದಿಕೆಯಲ್ಲಿ ಗ್ರಾಪಂ ಸದಸ್ಯ ಗಂಗಾಧರ ಗೌಡ, ಎಸ್‌.ಡಿ.ಎಮ್‌.ಸಿ ಅಧ್ಯಕ್ಷ ವಾಸುದೇವ ನಾಯ್ಕ, ಮುಖ್ಯಾಧ್ಯಾಪಕ ರಮೇಶ ನಾಯ್ಕ ಉಪಸ್ಥಿತರಿದ್ದರು.

ಎನ್‌.ಎಸ್‌.ಎಸ್‌ ಅಧಿಕಾರಿ ಅಣ್ಣಪ್ಪ ನಾಯ್ಕ ಪ್ರಾಸ್ತಾವಿಕ ಸ್ವಾಗತಿಸಿದರು. ಶ್ವೇತಾ ಆಚಾರ್ಯ ಪ್ರಾರ್ಥಿಸಿದರು. ನಾಗೇಶ ನಾಯ್ಕ ಪ್ರತಿಜ್ಞಾ ವಿಧಿ ಬೋಧಿಸಿದರು. ವೆಂಕಟಮೂರ್ತಿ ವಂದಿಸಿದರು. ಶ್ವೇತಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ಸೌಮ್ಯ ನಾಯ್ಕ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ