ಆ್ಯಪ್ನಗರ

ಸ್ವಾತಂತ್ರ್ಯೋತ್ಸವ ; ಸಕಲ ಸಿದ್ಧತೆ ಮಾಡಿಕೊಳ್ಳಿ ಡಿಸಿ ಸೂಚನೆ

ಕಾರವಾರ : ಆಗಸ್ಟ್‌ 15ರಂದು ನಡೆಯುವ ಸ್ವಾತಂತ್ರ್ಯೋತ್ಸವವನ್ನು ಸಾಮಾಜಿಕ ಅಂತರ, ಸ್ಯಾನಿಟೈಸರ್‌, ಮಾಸ್ಕ್‌ಗಳ ಬಳಕೆಯಂತಹ ಸರಕಾರಿ ನಿಯಮದೊಂದಿಗೆ ಜಿಲ್ಲಾಪೊಲೀಸ್‌ ಪರೇಡ್‌ ಮೈದಾನದಲ್ಲಿಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 4 Aug 2020, 5:00 am
ಕಾರವಾರ : ಆಗಸ್ಟ್‌ 15ರಂದು ನಡೆಯುವ ಸ್ವಾತಂತ್ರ್ಯೋತ್ಸವವನ್ನು ಸಾಮಾಜಿಕ ಅಂತರ, ಸ್ಯಾನಿಟೈಸರ್‌, ಮಾಸ್ಕ್‌ಗಳ ಬಳಕೆಯಂತಹ ಸರಕಾರಿ ನಿಯಮದೊಂದಿಗೆ ಜಿಲ್ಲಾಪೊಲೀಸ್‌ ಪರೇಡ್‌ ಮೈದಾನದಲ್ಲಿಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web gurudatt
ಸ್ವಾತಂತ್ರ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿನಡೆಯಿತು. ಡಿಸಿ ಡಾ. ಹರೀಶಕುಮಾರ ಕೆ., ಸಿಇಒ , ಎಸ್‌ಪಿ ಇತರರು ಇದ್ದರು.


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಸೋಮವಾರ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೋವಿಡ್‌-19 ವ್ಯಾಪಕವಾಗಿ ಹರಡಿರುವ ಈ ಸಂದರ್ಭದಲ್ಲಿಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತು ಕೇಂದ್ರ ಸರಕಾರ ಕೆಲವು ಮಾರ್ಗದರ್ಶನಗಳನ್ನು ನೀಡಿದೆ. ಈ ಮಾರ್ಗದರ್ಶನದ ಪ್ರಕಾರ ಜಿಲ್ಲಾಮಟ್ಟದಲ್ಲಿಪರೇಡ್‌, ರಾಷ್ಟ್ರ ಧ್ವಜಾರೋಹಣ, ಜಿಲ್ಲಾಉಸ್ತುವಾರಿ ಸಚಿವರಿಂದ ಭಾಷಣ ಹಾಗೂ ಮತ್ತಿತರ ವಿಧಿ ವಿಧಾಯಕ ಕಾರ್ಯಕ್ರಮಗಳ ಮೂಲಕ ಕಡಿಮೆ ಸಂಖ್ಯೆಯಲ್ಲಿಜನಸೇರಿ ರಾಷ್ಟ್ರಕ್ಕೆ ಗೌರವ ಸಲ್ಲಿಸಬೇಕು. ಯಾವುದೇ ರೀತಿಯಿಂದಲೂ ಚ್ಯುತಿ ಬಾರದಂತೆ ಸ್ವಾತಂತ್ರ್ಯೋತ್ಸವ ಆಚರಿಸಬೇಕೆಂದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಹಿನ್ನೆಲೆಯಲ್ಲಿಈ ವರ್ಷ ಶಾಲಾ-ಕಾಲೇಜು ಮಕ್ಕಳಿಗೆ ಸಾಂಸ್ಕ್ರತಿಕ ಕಾರ್ಯಕ್ರಮ ಹಾಗೂ ಪಥಸಂಚಲನ ಇರುವುದಿಲ್ಲ. ಕೇವಲ ಪೊಲೀಸ್‌, ಗೃಹ ರಕ್ಷಕದಳ, ಅರಣ್ಯ, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ನಾಲ್ಕು ತಂಡಗಳಿಂದ ಮಾತ್ರ ಪಥಸಂಚಲನ ನಡೆಯಬೇಕು ಎಂದರು.

ಸರ್ಕಾರದ ಮಾರ್ಗಸೂಚಿ ಅನ್ವಯ ಬೆಳಗ್ಗೆ 7.15ಕ್ಕೆ ಜಿಲ್ಲಾಧಿಕಾರಿ ಗೃಹಕಚೇರಿಯಲ್ಲಿ, 7.30ಕ್ಕೆ ಎಲ್ಲಾಶಾಲಾ-ಕಾಲೇಜು ಸರ್ಕಾರಿ ಕಚೇರಿಗಳಲ್ಲಿ, 8.15ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, 9 ಗಂಟೆಗೆ ಜಿಲ್ಲಾಪೊಲೀಸ್‌ ಪರೇಡ್‌ ಮೈದಾನದಲ್ಲಿಅಚ್ಚುಕಟ್ಟಾಗಿ ಧ್ವಜಾರೋಹಣ ನೆರವೇರಬೇಕೆಂದು ತಿಳಿಸಿದರು.

ಈ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಆರೋಗ್ಯ ಇಲಾಖೆ, ಸರ್ಕಾರಿ ವೈದ್ಯರು, ನರ್ಸ್‌ಗಳು, ಪಿಡಿಒ, ಪೌರಕಾರ್ಮಿಕರು ಮತ್ತಿತರ ಸೇವೆಗಳಲ್ಲಿತೊಡಗಿಕೊಂಡಿರುವ ಕೊರೊನಾ ವಾರಿಯರ್ಸ್‌ಗಳನ್ನು ಸಂಬಂಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳು ಗುರುತಿಸಿ ಅವರಲ್ಲೊಬ್ಬರನ್ನು ಪ್ರತಿನಿಧಿಯನ್ನಾಗಿ ಗೌರವಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿಜಿಪಂ ಸಿಇಒ ಎಂ.ರೋಷನ್‌, ಅಪರ ಜಿಲ್ಲಾಧಿಕಾರಿ ಎಚ್‌.ಕೆ.ಕೃಷ್ಣಮೂರ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ