ಆ್ಯಪ್ನಗರ

‘ಇಂದಿರಾಗಾಂಧಿ ವಸತಿಶಾಲೆಗೆ ಇನ್ನಷ್ಟು ಸೌಲಭ್ಯ’

ಮುಂಡಗೋಡ : ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡದಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಕಾರ್ಯ ನಿರ್ವಹಿಸಲಿದ್ದು, ವಿದ್ಯಾರ್ಥಿಗಳಿಗೆ ಮತ್ತಷ್ಟು ಸೌಲಭ್ಯಗಳು ಸಿಗಲಿವೆ ಎಂದು ಪರಿಶಿಷ್ಟ ಪಂಗಡ ವಸತಿ ಶಾಲೆಗಳ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ ಹೇಳಿದರು.

Vijaya Karnataka 17 Jan 2019, 5:00 am
ಮುಂಡಗೋಡ : ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡದಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಕಾರ್ಯ ನಿರ್ವಹಿಸಲಿದ್ದು, ವಿದ್ಯಾರ್ಥಿಗಳಿಗೆ ಮತ್ತಷ್ಟು ಸೌಲಭ್ಯಗಳು ಸಿಗಲಿವೆ ಎಂದು ಪರಿಶಿಷ್ಟ ಪಂಗಡ ವಸತಿ ಶಾಲೆಗಳ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ ಹೇಳಿದರು.
Vijaya Karnataka Web indira gandhis housewife more feature
‘ಇಂದಿರಾಗಾಂಧಿ ವಸತಿಶಾಲೆಗೆ ಇನ್ನಷ್ಟು ಸೌಲಭ್ಯ’


ತಾಲೂಕಿನ ಮಳಗಿ ಗ್ರಾಮದ ಶಿವಗಣೇಶ ಮಂದಿರದ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಇಂದಿರಾಗಾಂಧಿ ವಸತಿ ಶಾಲೆಯ ಎರಡನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎರಡು ವರ್ಷಗಳಿಂದ ಆರಂಭವಾಗಿರುವ ಈ ಶಾಲೆ ಉತ್ತಮವಾಗಿ ನಡೆಯುತ್ತಿದೆ. ಶಿಕ್ಷ ಕರು ಸಾಕಷ್ಟು ಶ್ರಮ ವಹಿಸಿ ಶಾಲೆಯನ್ನು ನಡೆಸಿಕೊಂಡು ಹೋಗುತ್ತಿದ್ದು, ಸದ್ಯ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಲ್ಪ ಮೆಟ್ಟಿಗೆ ತೊಂದರೆಯಾಗಬಹುದು. ಮುಂದಿನ ದಿನದಲ್ಲಿ ಸ್ವಂತ ಕಟ್ಟಡದಲ್ಲಿ ನಡೆಯಲಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಹಾಗೂ ಜಾಗವನ್ನು ಗುರುತಿಸಲಾಗಿದೆ ಎಂದರು.

2-3 ದಿನದಲ್ಲಿ ಮಕ್ಕಳಿಗೆ ಸ್ನಾನ ಮಾಡಲು ಬಿಸಿನೀರು ಒದಗಿಸಲಾಗುವುದು ಎಂದು ಹೇಳಿದರು.

ನಂತರ ಜಿ.ಪಂ. ಮಾಜಿ ಸದಸ್ಯ ಅಶೋಕ ಶಿರ್ಸಿಕರ ಮಾತನಾಡಿ, ನಮ್ಮ ಗ್ರಾಮದಲ್ಲಿ ಈ ಶಾಲೆ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಈ ವಸತಿ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷ ಣ ನೀಡಲಾಗುತ್ತಿದೆ. ಮಕ್ಕಳು ಶಿಕ್ಷ ಣವಂತರಾಗುವ ಮೂಲಕ ಸಮಾಜದಲ್ಲಿ ಗಣ್ಯವ್ಯಕ್ತಿಗಳಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದರು.

ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು ಆರು ಹಾಗೂ ಏಳನೆ ತರಗತಿಯ ವಿದ್ಯಾರ್ಥಿಗಳು ನಾಟಕ, ಜಾನಪದ, ಭಕ್ತಿಗೀತೆ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುವ ಮೂಲಕ ನೋಡುಗರ ಮನಸೂರೆಗೊಳಿಸಿದರು.

ಸ್ಥಳೀಯ ಮುಖಂಡರಾದ ಆರ್‌.ಜಿ.ನಾಯ್ಕ, ಮಧುಕರ ಶೇಟ್‌, ಎ.ಎ.ಪಾಟೀಲ, ಶಾಲಾ ಮುಖ್ಯಾಧ್ಯಾಪಕ ರಾಘವೇಂದ್ರ, ಅರವಿಂದ ಗುಡವಿ ಮುಂತಾದವರಿದ್ದರು. ರಶ್ಮಿ ಜಿ.ಡಿ, ರಾಜು ಶಿಡ್ಲಾಪುರ, ಪವಿತ್ರಾ ಹುಲೆಕಲ್‌ ನಿರೂಪಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ