ಆ್ಯಪ್ನಗರ

ಸೋಂಕಿತ ಗರ್ಭಿಣಿ ಗುಣಮುಖ

ಕಾರವಾರ:ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿಅವರನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಇನ್ನು 14 ದಿನಗಳ ಕಾಲ ಭಟ್ಕಳದ ಫೆಸಿಲಿಟೇಶನ್‌ ಕೇಂದ್ರದಲ್ಲಿಕ್ವಾರಂಟೈನ್‌ ನಲ್ಲಿಇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vijaya Karnataka 25 Apr 2020, 5:00 am
ಕಾರವಾರ:ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿಅವರನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಇನ್ನು 14 ದಿನಗಳ ಕಾಲ ಭಟ್ಕಳದ ಫೆಸಿಲಿಟೇಶನ್‌ ಕೇಂದ್ರದಲ್ಲಿಕ್ವಾರಂಟೈನ್‌ ನಲ್ಲಿಇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Vijaya Karnataka Web infected pregnant cure
ಸೋಂಕಿತ ಗರ್ಭಿಣಿ ಗುಣಮುಖ


ಜಿಲ್ಲೆಯ ಬಹುತೇಕ ಕೊರೊನಾ ಸೋಂಕಿತರಿಗೆ ಕಾರವಾರದ ಐಎನ್‌ ಎಸ್‌ ಪತಂಜಲಿ ಆಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗಿದೆ. ಆದರೆ ಮಹಿಳೆ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿಹೆಚ್ಚಿನ ವೈದ್ಯಕೀಯ ಸೌಲಭ್ಯದ ಅಗತ್ಯ ಕಂಡುಬಂದಿದ್ದು ಉಡುಪಿಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಗುಣಮುಖರಾದ ಮಹಿಳೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಮತ್ತಿತರ ಹಿರಿಯ ಅಧಿಕಾರಿಗಳು ಬೀಳ್ಕೊಟ್ಟರು.

ಇದರೊಂದಿಗೆ ಜಿಲ್ಲೆಯ ಒಟ್ಟು 11 ಸೋಂಕಿತರಲ್ಲಿ 10 ಜನ ಗುಣಮುಖರಾದಂತಾಗಿದೆ. ಶುಕ್ರವಾರ ಗುಣಮುಖರಾದ ಗರ್ಭಿಣಿ ಪತಿ ಪತಂಜಲಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ. ಸಧ್ಯ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲೆಯ

ಏಕೈಕ ಸೋಂಕಿತ ವ್ಯಕ್ತಿಯಾಗಿದ್ದಾರೆ. ಅವರೂ ಸಹ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಬಹುಬೇಗ ಗುಣಮುಖರಾಗುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ