ಆ್ಯಪ್ನಗರ

ಸಾಧಕ ಕಾರ್ಮಿಕರಿಂದ ಅರ್ಜಿ ಆಹ್ವಾನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗಾಗಿ ಮಾರ್ಚ್ 1 ರಂದು ಕಾರ್ಮಿಕರ ಸಮ್ಮಾನ ದಿನಾಚರಣೆ ಅಂಗವಾಗಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 11 Feb 2020, 5:00 am
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗಾಗಿ ಮಾರ್ಚ್ 1 ರಂದು ಕಾರ್ಮಿಕರ ಸಮ್ಮಾನ ದಿನಾಚರಣೆ ಅಂಗವಾಗಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web invitation to apply by prospective workers
ಸಾಧಕ ಕಾರ್ಮಿಕರಿಂದ ಅರ್ಜಿ ಆಹ್ವಾನ


ಗೃಹ ಕೆಲಸದ ಕಾರ್ಮಿಕರು, ಹಮಾಲರು, ದರ್ಜಿಗಳು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಮೆಕಾನಿಕ್‌ಗಳು, ಚಿಂದಿ ಆಯುವವರು, ಖಾಸಗಿ ವಾಣಿಜ್ಯ ವಾಹನ ಚಾಲಕರು, ಅಗಸರು, ಅಕ್ಕಸಾಲಿಗರು, ಕ್ಷೌರಿಕರು, ಕಮ್ಮಾರರು, ಕಂಬಾರರು, ಮಂಡಕ್ಕಿಭಟ್ಟಿಗಳಲ್ಲಿಕೆಲಸ ನಿರ್ವಹಿಸುವ ಕಾರ್ಮಿಕರು ಕಾರ್ಮಿಕ ಸಮ್ಮಾನ ಪ್ರಶಸ್ತಿ ಹಾಗೂ ವಿಶೇಷ ಪುರಸ್ಕಾರಗಳಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಜಿಲ್ಲಾಕಾರ್ಮಿಕ ಅಧಿಕಾರಿಗಳ ಕಚೇರಿ ಮತ್ತು ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿಅರ್ಜಿಗಳನ್ನು ಪಡೆದು ಸಂಪೂರ್ಣ ವಿವರ ಭರ್ತಿಮಾಡಿ ಇತ್ತೀಚಿನ ಪಾಸ್‌ಪೋರ್ಟ್‌ ಭಾವಚಿತ್ರ, ಆಧಾರ, ವೋಟರ್‌ ಕಾರ್ಡ್‌, ಬಿಪಿಎಲ್‌, ಶೈಕ್ಷಣಿಕ ಪ್ರಮಾಣ ಪತ್ರ, ವೃತ್ತಿ ಅನುಭವದ ದಾಖಲೆಗಳು, ಜಾತಿ ಪ್ರಮಾಣ ಪತ್ರ, ಅಂಗವಿಕಲ ಸರ್ಟಿಫಿಕೇಟ್‌ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಸಹಾಯಹಸ್ತ ಯೋಜನೆಯಡಿ ನೋಂದಣಿಯಾಗದಿದ್ದರೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಕಾರ್ಮಿಕ ವಲಯದಿಂದ 3 ಕಾರ್ಮಿಕರನ್ನು ಶ್ರಮ ಪ್ರಶಸ್ತಿಗೆ ಗುರುತಿಸಿ, ಪ್ರಥಮ, ದ್ವಿತೀಯ, ತೃತೀಯ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಥಮ ಪ್ರಶಸ್ತಿಗೆ 15 ಸಾವಿರ ರೂ. ಹಾಗೂ ಚಿನ್ನದ ಪದಕ, ದ್ವಿತೀಯ ಪ್ರಶಸ್ತಿ 10 ಸಾವಿರ ರೂ. ಹಾಗೂ ಬೆಳ್ಳಿ ಪದಕ, ತೃತೀಯ ಪ್ರಶಸ್ತಿ 8 ಸಾವಿರ ರೂ. ಬೆಳ್ಳಿ ಪದಕ ನೀಡಲಾಗುವುದು ಎಂದು ಪ್ರಕಟಣೆಯಲ್ಲಿಜಿಲ್ಲಾಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ