ಆ್ಯಪ್ನಗರ

ಜೆಡಿಎಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಹಳಿಯಾಳ : ಜಾತ್ಯತೀತ ಜನತಾದಳದ ತಾಲೂಕು ಘಟಕದ ಅಧ್ಯಕ್ಷ ರಾಗಿ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸುಭಾಸ ಲೋಕಪ್ಪಾ ಗೌಡಾ ಅವರು ದಿಢೀರ್‌ ಆಗಿ ತಮ್ಮ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷ ದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ ಅವರಿಗೆ ರವಾನಿಸಿದ್ದಾರೆ. ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್‌ ತಾಲೂಕಾಧ್ಯಕ್ಷ ರ ರಾಜೀನಾಮೆಯು ಹಲವಾರು ಸಂಶಯ ಹುಟ್ಟಿಸಿದೆ. ತಾಲೂಕಿನಲ್ಲಿ ಸಂಪೂರ್ಣ ನೆಲಕಚ್ಚಿದ ಪಕ್ಷ ಕ್ಕೆ ಪುನಶ್ಚೇತನ ನೀಡುವ ಮೂಲಕ ಸಾವಿರಾರು ಕಾರ್ಯಕರ್ತರನ್ನು ತಯಾರು ಮಾಡುವುದರ ಜತೆಗೆ ಪಕ್ಷ ಕ್ಕೆ ಬಲ ನೀಡಿದ್ದ ರೈತ ಮುಖಂಡನ ರಾಜೀನಾಮೆ ಪಕ್ಷ ಕ್ಕೆ ಹಾನಿಯನ್ನುಂಟು ಮಾಡಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

Vijaya Karnataka 17 Apr 2019, 5:00 am
ಹಳಿಯಾಳ : ಜಾತ್ಯತೀತ ಜನತಾದಳದ ತಾಲೂಕು ಘಟಕದ ಅಧ್ಯಕ್ಷ ರಾಗಿ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸುಭಾಸ ಲೋಕಪ್ಪಾ ಗೌಡಾ ಅವರು ದಿಢೀರ್‌ ಆಗಿ ತಮ್ಮ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷ ದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ ಅವರಿಗೆ ರವಾನಿಸಿದ್ದಾರೆ. ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್‌ ತಾಲೂಕಾಧ್ಯಕ್ಷ ರ ರಾಜೀನಾಮೆಯು ಹಲವಾರು ಸಂಶಯ ಹುಟ್ಟಿಸಿದೆ. ತಾಲೂಕಿನಲ್ಲಿ ಸಂಪೂರ್ಣ ನೆಲಕಚ್ಚಿದ ಪಕ್ಷ ಕ್ಕೆ ಪುನಶ್ಚೇತನ ನೀಡುವ ಮೂಲಕ ಸಾವಿರಾರು ಕಾರ್ಯಕರ್ತರನ್ನು ತಯಾರು ಮಾಡುವುದರ ಜತೆಗೆ ಪಕ್ಷ ಕ್ಕೆ ಬಲ ನೀಡಿದ್ದ ರೈತ ಮುಖಂಡನ ರಾಜೀನಾಮೆ ಪಕ್ಷ ಕ್ಕೆ ಹಾನಿಯನ್ನುಂಟು ಮಾಡಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
Vijaya Karnataka Web jds dimite como presidente
ಜೆಡಿಎಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ


ಪಕ್ಷ ದಲ್ಲಿಯ ಆಂತರಿಕ ವಿದ್ಯಮಾನಗಳಿಂದ ಮನನೊಂದು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿರುವ ಸುಭಾಸ ಲೋಕಪ್ಪಾ ಗೌಡಾ, ಯಾವುದೇ ಪಕ್ಷ ಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ