ಆ್ಯಪ್ನಗರ

ಜೆಎನ್‌ಯು ವಿವಿ ಘಟನೆ ಖಂಡಿಸಿ ಮನವಿ

ಭಟ್ಕಳ : ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿನುಗ್ಗಿದ ಮುಸುಕುಧಾರಿಗಳು ವಿದ್ಯಾರ್ಥಿಗಳು ಹಾಗೂ ಅಲ್ಲಿನ ಪ್ರಾಧ್ಯಾಪಕರ ಮೇಲೆ ದಾಳಿ ನಡೆಸಿದ್ದು, ಕೂಡಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗೆನೈಸೇಶನ್‌ (ಎಸ್‌ಐಓ) ನೇತೃತ್ವದಲ್ಲಿನೂರಾರು ವಿದ್ಯಾರ್ಥಿಗಳು ಇಲ್ಲಿನ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

Vijaya Karnataka 8 Jan 2020, 5:00 am
ಭಟ್ಕಳ : ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿನುಗ್ಗಿದ ಮುಸುಕುಧಾರಿಗಳು ವಿದ್ಯಾರ್ಥಿಗಳು ಹಾಗೂ ಅಲ್ಲಿನ ಪ್ರಾಧ್ಯಾಪಕರ ಮೇಲೆ ದಾಳಿ ನಡೆಸಿದ್ದು, ಕೂಡಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗೆನೈಸೇಶನ್‌ (ಎಸ್‌ಐಓ) ನೇತೃತ್ವದಲ್ಲಿನೂರಾರು ವಿದ್ಯಾರ್ಥಿಗಳು ಇಲ್ಲಿನ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.
Vijaya Karnataka Web jnu appeals condemnation of vv incident
ಜೆಎನ್‌ಯು ವಿವಿ ಘಟನೆ ಖಂಡಿಸಿ ಮನವಿ


ಜೆಎನ್‌ಯು ವಿದ್ಯಾರ್ಥಿ ಹಾಗೂ ಶಿಕ್ಷಕರ ಮೇಲಿನ ದಾಳಿಯು ಪೊಲೀಸ್‌ ಆಡಳಿತ ವೈಫಲ್ಯವನ್ನು ಎತ್ತಿತೋರಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು. ಈ ಎಲ್ಲಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವುದರ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿಭಯದ ವಾತಾವರಣ ನಿರ್ಮಿಸುತ್ತಿರುವವರ ಮುಖವಾಡ ಕಳಚಬೇಕು ಎಂದು ಮನವಿ ಪತ್ರದಲ್ಲಿಆಗ್ರಹಿಸಲಾಗಿದೆ.

ಭಟ್ಕಳ ಸಹಾಯಕ ಆಯುಕ್ತ ಸಾಜೀದ್‌ ಮುಲ್ಲಾಮನವಿ ಸ್ವೀಕರಿಸಿದರು. ಭಟ್ಕಳ ಎಸ್‌ಐಓ ಅಧ್ಯಕ್ಷ ಎಸ್‌.ಎಮ್‌.ಸೈಯದ್‌ ಅಬೂದ್‌ ಸೇರಿದಂತೆ ಹಲವು ವಿದ್ಯಾರ್ಥಿ ಮುಖಂಡರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ