ಆ್ಯಪ್ನಗರ

ಭಟ್ಕಳ ಪುರಸಭೆಗೆ ಉರ್ದು ನಾಮಫಲಕ ಅಳವಡಿಕೆ: ತೆರವುಗೊಳಿಸಲು ಕನ್ನಡಪರ ಸಂಘಟನೆಗಳ ಪಟ್ಟು

ಭಟ್ಕಳ ಪುರಸಭೆ ಕಟ್ಟಡಕ್ಕೆ ಹೊಸದಾಗಿ ಸುಣ್ಣಬಣ್ಣ ಬಳಿಯುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದರ ಮುಂದುವರಿದ ಭಾಗವಾಗಿ ಕಟ್ಟಡದ ಮುಂಭಾಗದಲ್ಲಿ ಪುರಸಭಾ ಕಚೇರಿ, ಭಟ್ಕಳ ಎಂಬ ನಾಮಫಲಕ ಅಳವಡಿಸಲಾಗುತ್ತಿದೆ. ಈ ವೇಳೆ ಕನ್ನಡ, ಇಂಗ್ಲಿಷ್ ಜೊತೆಗೆ ಉರ್ದುವಿನಲ್ಲೂ ನಾಮಫಲಕ ಅಳವಡಿಸುತ್ತಿರುವುದಕ್ಕೆ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಉರ್ದು ನಾಮಫಲಕ ತೆರವು ಮಾಡುವಂತೆ ಪುರಸಭೆಯೆದುರು ಪ್ರತಿಭಟಿಸಿವೆ.

Lipi 28 Jun 2022, 3:00 pm

ಹೈಲೈಟ್ಸ್‌:

  • ಕಾರವಾರದಲ್ಲಿ ಕನ್ನಡ- ಕೊಂಕಣಿ ಭಾಷೆ ವಿವಾದ ಬಳಿಕ ಮತ್ತೊಂದು ಕಿರಿಕ್
  • ಭಟ್ಕಳ ಪುರಸಭೆಗೆ ಉರ್ದು ನಾಮಫಲಕ ಅಳವಡಿಕೆ
  • ತೆರವುಗೊಳಿಸಲು ಕನ್ನಡಪರ ಸಂಘಟನೆಗಳ ಪಟ್ಟು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಭಾಷಾ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಕಾರವಾರದಲ್ಲಿ ಕನ್ನಡ- ಕೊಂಕಣಿ ಭಾಷೆಗಳ ನಡುವೆ ಏರ್ಪಟ್ಟಿದ್ದ ವಿವಾದವೀಗ ಭಟ್ಕಳಕ್ಕೆ ಹರಡಿದ್ದು, ಕನ್ನಡದ ಜೊತೆಗೆ ಉರ್ದುವಿನಲ್ಲಿ ಭಟ್ಕಳ ಪುರಸಭೆಯ ಬೋರ್ಡ್‌ಗಳನ್ನ ಬರೆಯಿಸುತ್ತಿರುವುದು ಇದೀಗ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.
ಕೆಲ ದಿನಗಳ ಹಿಂದೆಷ್ಟೇ ಭಟ್ಕಳ ಪುರಸಭೆ ಕಟ್ಟಡಕ್ಕೆ ಹೊಸದಾಗಿ ಸುಣ್ಣಬಣ್ಣ ಬಳಿಯುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದರ ಮುಂದುವರಿದ ಭಾಗವಾಗಿ ಕಟ್ಟಡದ ಮುಂಭಾಗದಲ್ಲಿ ಪುರಸಭಾ ಕಚೇರಿ, ಭಟ್ಕಳ ಎಂಬ ನಾಮಫಲಕ ಅಳವಡಿಸಲಾಗುತ್ತಿದೆ. ಈ ವೇಳೆ ಕನ್ನಡ, ಇಂಗ್ಲಿಷ್ ಜೊತೆಗೆ ಉರ್ದುವಿನಲ್ಲೂ ನಾಮಫಲಕ ಅಳವಡಿಸುತ್ತಿರುವುದಕ್ಕೆ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಉರ್ದು ನಾಮಫಲಕ ತೆರವು ಮಾಡುವಂತೆ ಪುರಸಭೆಯೆದುರು ಪ್ರತಿಭಟಿಸಿವೆ.
#karwarforkonkani ಅಭಿಯಾನ; ಎರಡಂಕಿಯನ್ನೂ ದಾಟದ ಟ್ವೀಟ್‌ಗಳು!
ಈ ವೇಳೆ ಕಚೇರಿ ಒಳಗೆ ನುಗ್ಗಲು ಯತ್ನಿಸಿದ್ದ ಕನ್ನಡಪರ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ್ದಾರೆ. ಸ್ಥಳೀಯ ಭಾಷೆಯಲ್ಲಿ ನಾಮಫಲಕಕ್ಕೆ ಎಲ್ಲಿಯೂ ಅವಕಾಶವಿಲ್ಲ. ಹಾಗಿದ್ದರೆ ರಾಜ್ಯದಾದ್ಯಂತ ನಾಮಫಲಕಗಳನ್ನು ಕನ್ನಡ ಇಂಗ್ಲೀಷ್ ಮತ್ತು ಹಿಂದಿ ಈ ಮೂರು ಭಾಷೆಗಳಿಗೆ ಆದ್ಯತೆ ಬಿಟ್ಟು ಬೇರೆ ಯಾವುದೇ ಭಾಷೆಗಳಿಗೆ ಆದ್ಯತೆ ನೀಡಲಾಗುವುದಿಲ್ಲ. ಈ ನಡುವೆ ಪ್ರಾದೇಶಿಕ ಭಾಷೆಗೆ ತಕ್ಕಂತೆ ನಾಮಫಲಕಗಳನ್ನು ಅಳವಡಿಸುತ್ತಾ ಬಂದರೆ ಕೊಂಕಣಿ, ಮರಾಠಿ, ಉರ್ದು, ನವಾಯತ್ ಹೀಗೆ ಹತ್ತು ಹಲವು ಬಾಷೆಗಳಿಗೆ ಆದ್ಯತೆ ನೀಡಬೇಕಾಗುತ್ತದೆ. ಹೀಗೆ ಮಾಡುವುದರಿಂದ ಪ್ರತಿಯೊಂದು ಬೇರೆ ಬೇರೆ ಭಾಷೆಯವರು ಪಟ್ಟು ಹಿಡಿದು ತಾವು ಮಾತನಾಡುವ ಭಾಷೆಯಲ್ಲಿ ನಾಮಫಲಕಗಳಿಗೆ ಬೇಡಿಕೆಯಿಡುತ್ತಾರೆ. ಆಗ ಕರ್ನಾಟಕದ ಕನ್ನಡಕ್ಕೆ ಭಾಷೆಗೆ ಬೆಲೆ ಇಲ್ಲದಂತಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಇನ್ನು ಪುರಸಭೆ ಮುಖ್ಯಾಧಿಕಾರಿಗಳಿಗೆ ಹಾಗೂ ಸಿಪಿಐ ಮಹಾಬಲೇಶ್ವರ ನಾಯ್ಕ ಅವರಿಗೆ ಉರ್ದು ನಾಮಫಲಕ ತೆರವು ಮಾಡಬೇಕೆಂದು ಶ್ರೀಭುವನೇಶ್ವರಿ ಕನ್ನಡ ಸಂಘದಿಂದ ಮನವಿ ಸಲ್ಲಿಸಲಾಗಿದ್ದು, ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮುಂದೇನಾಗಲಿದೆ ಎನ್ನುವುದನ್ನ ಕಾದುನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ