ಕಿಸಾನ್ ಸಮ್ಮಾನ್: 10 ಕೊನೆ ದಿನ
ಹೊನ್ನಾವರ : 2019-20ನೇ ಸಾಲಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಈ ವರೆಗೆ ಅರ್ಜಿ ಸಲ್ಲಿಸದೇ ಇರುವ ರೈತರು ಜುಲೈ 10ರೊಳಗೆ ಸಲ್ಲಿಸಬಹುದು ಎಂದು ತಹಸೀಲ್ದಾರರು ತಿಳಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು ಕೃಷಿ ಇಲಾಖೆ, ಗ್ರಾಮ ಪಂಚಾಯಿತಿ, ಗ್ರಾಮಲೆಕ್ಕಿಗರು, ನೆಮ್ಮದಿ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಆಧಾರ್ ಕಾರ್ಡ್ನ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Vijaya Karnataka 8 Jul 2019, 5:00 am
ಹೊನ್ನಾವರ : 2019-20ನೇ ಸಾಲಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಈ ವರೆಗೆ ಅರ್ಜಿ ಸಲ್ಲಿಸದೇ ಇರುವ ರೈತರು ಜುಲೈ 10ರೊಳಗೆ ಸಲ್ಲಿಸಬಹುದು ಎಂದು ತಹಸೀಲ್ದಾರರು ತಿಳಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು ಕೃಷಿ ಇಲಾಖೆ, ಗ್ರಾಮ ಪಂಚಾಯಿತಿ, ಗ್ರಾಮಲೆಕ್ಕಿಗರು, ನೆಮ್ಮದಿ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಆಧಾರ್ ಕಾರ್ಡ್ನ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.