ಆ್ಯಪ್ನಗರ

ಕಾನೂನು ಸಾಕ್ಷ ರತಾ ಕಾರ್ಯಕ್ರಮ ಇಂದು

ಯಲ್ಲಾಪುರ : ಪಟ್ಟಣದ ಮದರ್‌ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.17ರಂದು ಬೆಳಗ್ಗೆ 10 ಗಂಟೆಗೆ ಪೊಲೀಸ್‌ ದೂರು ಪ್ರಾಧಿಕಾರ ಹಾಗೂ ಸಾಮಾನ್ಯ ಕಾನೂನುಗಳ ಕುರಿತು ಕಾನೂನು ಸಾಕ್ಷ ರತಾ ಕಾರ್ಯಕ್ರಮ ನಡೆಯಲಿದೆ.

Vijaya Karnataka 17 Jul 2019, 5:00 am
ಯಲ್ಲಾಪುರ : ಪಟ್ಟಣದ ಮದರ್‌ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.17ರಂದು ಬೆಳಗ್ಗೆ 10 ಗಂಟೆಗೆ ಪೊಲೀಸ್‌ ದೂರು ಪ್ರಾಧಿಕಾರ ಹಾಗೂ ಸಾಮಾನ್ಯ ಕಾನೂನುಗಳ ಕುರಿತು ಕಾನೂನು ಸಾಕ್ಷ ರತಾ ಕಾರ್ಯಕ್ರಮ ನಡೆಯಲಿದೆ.
Vijaya Karnataka Web legal literacy program today
ಕಾನೂನು ಸಾಕ್ಷ ರತಾ ಕಾರ್ಯಕ್ರಮ ಇಂದು


ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷ ಣ ಇಲಾಖೆ, ಪೊಲೀಸ್‌ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್‌ ನ್ಯಾಯಾಧೀಶ ವಿ.ವಿ.ಜೋಷಿ ಉದ್ಘಾಟಿಸುವರು. ಮದರ್‌ ತೆರೇಸಾ ಶಾಲೆಯ ಮುಖ್ಯಸ್ಥರಾದ ಪಾದರ್‌ ರೋಯ್ಸಟನ್‌ ಅಧ್ಯಕ್ಷ ತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಿವಿಲ್‌ ನ್ಯಾಯಾಧೀಶ ಓಂಕಾರ ಮೂರ್ತಿ, ಸಹಾಯಕ ಸರಕಾರಿ ಅಭಿಯೋಜಕ ಅಜೀತ ಜಿನಗೌಡರ್‌, ಸಿಪಿಐ ಡಾ.ಮಂಜುನಾಥ ನಾಯಕ, ಬಿಇಓ ಎನ್‌.ಆರ್‌.ಹೆಗಡೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಎಲ್ಲ ಪ್ಯಾನಲ್‌ ವಕೀಲರು, ಅರೆನ್ಯಾಯಿಕ ಸ್ವಯಂಸೇವಕರು ಪಾಲ್ಗೊಳ್ಳಲಿದ್ದಾರೆ. ಸಾಮಾನ್ಯ ಕಾನೂನುಗಳ ಕುರಿತು ವಕೀಲರಾದ ಸರಸ್ವತಿ ಭಟ್ಟ ಅವರು ಉಪನ್ಯಾಸ ನೀಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ