ಆ್ಯಪ್ನಗರ

ಕಾರ್ಮಿಕರು ಕಾನೂನು ಅರಿತುಕೊಳ್ಳಲಿ

ಕಾರವಾರ :ಕಾರ್ಮಿಕರಿಗೆ ಕಾನೂನಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಕಾನೂನಿನ ಬಗ್ಗೆ ಮೊದಲೇ ತಿಳಿದುಕೊಂಡಿದ್ದರೆ ಯಾವುದೇ ಕ್ಷೇತ್ರದಲ್ಲಿ ತಮಗೆ ಅನ್ಯಾಯವಾದಾಗ ಪರಿಹಾರ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Vijaya Karnataka 4 May 2019, 5:00 am
ಕಾರವಾರ :ಕಾರ್ಮಿಕರಿಗೆ ಕಾನೂನಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಕಾನೂನಿನ ಬಗ್ಗೆ ಮೊದಲೇ ತಿಳಿದುಕೊಂಡಿದ್ದರೆ ಯಾವುದೇ ಕ್ಷೇತ್ರದಲ್ಲಿ ತಮಗೆ ಅನ್ಯಾಯವಾದಾಗ ಪರಿಹಾರ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
Vijaya Karnataka Web KWR-1 GURUDATT 4


ಆಝಾದ್‌ ಯುಥ್‌ ಕ್ಲಬ್‌ ಹಾಗೂ ಕಲ್ಲೂರ್‌ ಎಜ್ಯುಕೇಶನ್‌ ಟ್ರಸ್ಟ್‌ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಶ್ರಮಿಸಬೇಕಿದೆ ಎಂದರು.

ಲಯನ್ಸ್‌ ಕ್ಲಬ್‌ ಅಧ್ಯಕ್ಷ ಸಮೀರ್‌ ಸಕ್ಸೇನಾ ಮಾತನಾಡಿ, ಕಾರ್ಮಿಕರು ತಮ್ಮ ಶ್ರಮವನ್ನು ದೇಶಕ್ಕಾಗಿ ಅರ್ಪಣೆ ಮಾಡಿದ ತ್ಯಾಗಿಗಳು. ಅವರನ್ನು ಗೌರವಿಸುವುದು ಉತ್ತಮ ಕಾರ‍್ಯ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಾರವಾರ ತಾಲೂಕಿನ ಅಧ್ಯಕ್ಷ ನಾಗರಾಜ ಹರಪನಹಳ್ಳಿ ಮಾತನಾಡಿ, ಕಾರ್ಮಿಕರು ನಗರದ ಉಸಿರು. ಅವರಿಲ್ಲದೇ ನಗರದ ಅಭಿವೃದ್ಧಿ ಸಾಧ್ಯವಿಲ್ಲ. ಎಲ್ಲರಿಗೂ ಸಮಾನವಾದ ಗೌರವವನ್ನು ನೀಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 1990ರಿಂದ ಕಾರವಾರ ನಗರ ಸಭೆಯಲ್ಲಿ ವಾಹನ ಚಾಲಕರಾಗಿ ಕಾರ‍್ಯ ನಿರ್ವಹಿಸುತ್ತಿರುವ ಸುಬ್ಬಯ್ಯ ರಾಮಾ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಸರಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಗಂಗೊಳ್ಳಿ ಅಧ್ಯಕ್ಷತೆ ವಹಿಸಿದ್ದರು. ನಜೀರ್‌ ಅಹಮದ್‌ ಯು.ಶೇಖ್‌, ಯೂತ್‌ ಕ್ಲಬ್‌ನ ಕಾರ‍್ಯದರ್ಶಿ ಮೊಹಮ್ಮದ್‌ ಉಸ್ಮಾನ್‌ ಶೇಖ್‌ ಸದಸ್ಯ ಮೊಹಮ್ಮದ್‌ ಅಸಿಫ್‌ ಶೇಖ್‌, ಭಾರತ್‌ ಸ್ಕೂಲ್‌ನ ಪ್ರಾಂಶುಪಾಲ ಮೊಹಮ್ಮದ್‌ ಖಲೀಲುಲ್ಲಾ, ಶಾಂತಿ ನಾಯ್ಕ, ಮೋಹನ ನಾಯ್ಕ, ಲಕ್ಷ ್ಮಣ ನಾಯ್ಕ, ಸಚಿನ ನಾಯ್ಕ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ