ಆ್ಯಪ್ನಗರ

ಕೇಂದ್ರೀಯ ವಿದ್ಯಾಲಯಕ್ಕೆ ಸ್ಥಳ ಪರಿಶೀಲನೆ

ಕಾರವಾರ: ತಾಲೂಕಿನ ಮುಡಗೇರಿಯಲ್ಲಿ ಕೇಂದ್ರೀಯ ವಿದ್ಯಾಲಯ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ದಿಲ್ಲಿಯಿಂದ ಆಗಮಿಸಿದ್ದ ಅಧಿಕಾರಿಗಳು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.

Vijaya Karnataka 9 Jul 2019, 5:00 am
ಕಾರವಾರ: ತಾಲೂಕಿನ ಮುಡಗೇರಿಯಲ್ಲಿ ಕೇಂದ್ರೀಯ ವಿದ್ಯಾಲಯ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ದಿಲ್ಲಿಯಿಂದ ಆಗಮಿಸಿದ್ದ ಅಧಿಕಾರಿಗಳು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.
Vijaya Karnataka Web location check for kendriya vidyalaya
ಕೇಂದ್ರೀಯ ವಿದ್ಯಾಲಯಕ್ಕೆ ಸ್ಥಳ ಪರಿಶೀಲನೆ


ಈ ಕೇಂದ್ರೀಯ ವಿದ್ಯಾಲಯಕ್ಕಾಗಿ 5 ಎಕರೆ ಜಮೀನು ಗುರುತಿಸಲಾಗಿದೆ. ಅಲ್ಲಿಯೇ ಶಾಲಾ ಕಟ್ಟಡ ಹಾಗೂ ಹಾಸ್ಟೆಲ್‌ ಇನ್ನಿತರ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ವರ್ಷದಿಂದಲೇ ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭರದ ಸಿದ್ಧತೆ ನಡೆಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾರವಾರದ ಉಪವಿಭಾಗಾಧಿಕಾರಿ ಅಭಿಜಿನ್‌, ''ವಿದ್ಯಾಲಯ ಮಂಜೂರಾಗಿದೆ. ಅದಕ್ಕಾಗಿ ಸೂಕ್ತ ಸ್ಥಳ ಒದಗಿಸುವಂತೆ ಕೇಂದ್ರ ಸರಕಾರದಿಂದ ಸೂಚನೆ ಬಂದಿದೆ. ಹೀಗಾಗಿ ಮುಡಗೇರಿಯಲ್ಲಿ ಸ್ಥಳ ಗುರುತಿಸಲಾಗಿದೆ'' ಎಂದರು.

''ಅಲ್ಲದೇ ಸೀಬರ್ಡ್‌ ಕಾಲೊನಿಯಲ್ಲಿ ಇರುವ ಹಳೆಯ ಶಾಲಾ ಕಟ್ಟಡವನ್ನು ತಾತ್ಕಾಲಿಕ ಶಾಲಾ ಕೊಠಡಿಗಳಿಗೆ ಬಳಸಿಕೊಳ್ಳಲಾಗುವುದು. ಅದನ್ನು ಪರೀಕ್ಷಿಸಲು ಅಧಿಕಾರಿಗಳ ತಂಡ ಮುಡಗೇರಿಗೆ ಭೇಟಿ ನೀಡಿದೆ. ನಗರಸಭೆ ಈಗ ಕಾರ್ಯ ನಿರ್ವಹಿಸುತ್ತಿರುವ ಕಟ್ಟಡವನ್ನೂ ಸಾಧ್ಯವಾದರೆ ತಾತ್ಕಾಲಿಕ ವ್ಯವಸ್ಥೆಗೆ ಬಳಸಿಕೊಳ್ಳಲಾಗುವುದು'' ಎಂದು ತಿಳಿಸಿದರು.

ಈಗಾಗಲೇ ಕಾರವಾರ ತಾಲೂಕಿನಲ್ಲಿ ಮೂರು ಕೇಂದ್ರೀಯ ವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸದಾಶಿವಗಡದ ಅಮೃತ ವಿದ್ಯಾಲಯ, ಐಎನ್‌ಎಸ್‌ ಕದಂಬ ನೌಕಾನೆಲೆ ಹಾಗೂ ಮಲ್ಲಾಪುರ ಟೌನ್‌ಶಿಪ್‌ನಲ್ಲಿ ಕೇಂದ್ರೀಯ ವಿದ್ಯಾಲಯಗಳಿವೆ. ಇದೀಗ ನಾಲ್ಕನೇ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೊಳ್ಳಲಿದೆ. ಪ್ರಭಾರ ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ತಹಸೀಲ್ದಾರ ರಾಮಚಂದ್ರ ಕಟ್ಟಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ