ಆ್ಯಪ್ನಗರ

ಹೊನ್ನಾವರದಲ್ಲಿಮಹರ್ಷಿ ವಾಲ್ಮೀಕಿ ಜಯಂತಿ

ಹೊನ್ನಾವರ : ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿಭಾನುವಾರ ನಡೆಯಿತು.

Vijaya Karnataka 14 Oct 2019, 5:00 am
ಹೊನ್ನಾವರ : ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿಭಾನುವಾರ ನಡೆಯಿತು.
Vijaya Karnataka Web 13 HNR 2_24


ತಹಸೀಲ್ದಾರ ವಿವೇಕ ಶೇಣ್ವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಮಹರ್ಷಿಗಳು ರಾಮಾಯಣ ಮಹಾಕಾವ್ಯ ರಚಿಸಿ ನಮ್ಮ ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದಾರೆ ಎಂದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಸುರೇಶ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯದಲ್ಲಿಬರುವ ಎಲ್ಲಪಾತ್ರಗಳು ತಮ್ಮದೇ ಆದ ಘನತೆ ಹಾಗೂ ಮಾರ್ಗದರ್ಶನ ಹೊಂದಿವೆ ಎಂದರು.

ಮುಖ್ಯ ಅತಿಥಿಯಾಗಿ ಪಪಂ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಶಿಶು ಅಭಿವೃದ್ಧಿ ಅಧಿಕಾರಿ ವಿ.ಎಚ್‌. ಪಾಟೀಲ, ದಲಿತ ಸಂಘದ ನಾಗರಾಜ ಹಳ್ಳೇರ ಪಾಲ್ಗೊಂಡಿದ್ದರು. ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುಧೀಶ ನಾಯ್ಕ ಸ್ವಾಗತಿಸಿ, ನಿರ್ವಹಿಸಿದರು. ಸಮಾಜ ಕಲ್ಯಾಣ ಇಲಾಖಾಧಿಕಾರಿ ಭಾರತಿ ಆಚಾರ್ಯ ವಂದಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ