ಆ್ಯಪ್ನಗರ

ಜೀವ ಬೆದರಿಕೆ ಆರೋಪದಡಿ ವ್ಯಕ್ತಿ ಸೆರೆ

ಯಲ್ಲಾಪುರ : ಜಾತಿ ನಿಂದನೆ, ಜೀವ ಬೆದರಿಕೆ ಹಾಕಿರುವುದು ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಯಲ್ಲಾಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಟ್ಟಣದ ಹಾದಿಬಾವಿ ಗಲ್ಲಿಯ ಮಂಗೇಶ ಕೈಸರೆ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Vijaya Karnataka 4 Aug 2019, 5:00 am
ಯಲ್ಲಾಪುರ : ಜಾತಿ ನಿಂದನೆ, ಜೀವ ಬೆದರಿಕೆ ಹಾಕಿರುವುದು ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಯಲ್ಲಾಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಟ್ಟಣದ ಹಾದಿಬಾವಿ ಗಲ್ಲಿಯ ಮಂಗೇಶ ಕೈಸರೆ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
Vijaya Karnataka Web man arrested for life threatening
ಜೀವ ಬೆದರಿಕೆ ಆರೋಪದಡಿ ವ್ಯಕ್ತಿ ಸೆರೆ


ಈ ಆರೋಪಿಯು ತಾಲೂಕಿನ ಮದ್ನೂರು ಗ್ರಾಮದ ಸಂತೋಷ ಸಿದ್ದಿ, ಫ್ರಾನ್ಸಿಸ್‌ ಸಿದ್ದಿ, ಬಸ್ತ್ಯಾಂವ್‌ ಸಿದ್ದಿ ಎಂಬುವವರಿಗೆ ಸೇರಿದ ಜಮೀನು ಸಾಗುವಳಿ ವಿಷಯದಲ್ಲಿ ವಾಗ್ವಾದ ನಡೆಸಿ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಇದೇ ವ್ಯಕ್ತಿ ಪಟ್ಟಣ ಪಂಚಾಯಿತಿ ಸಿಬ್ಬಂದಿಯೊಬ್ಬಳಿಗೆ ಇಲ್ಲ ಸಲ್ಲದ ಆರೋಪ ಮಾಡಿ, ಅವಳಿಂದ ಬಲವಂತವಾಗಿ 25000 ರೂ. ಹಣ ಪಡೆದ ಕುರಿತು ಇನ್ನೊಂದು ಪ್ರಕರಣ ದಾಖಲಾಗಿದೆ. ಮೂರನೇ ಪ್ರಕರಣದಲ್ಲಿ ಇದೇ ವ್ಯಕ್ತಿ ಪಟ್ಟಣದ ನೂತನನಗರದಲ್ಲಿ ವ್ಯಕ್ತಿಯೊಬ್ಬರು ಖರೀದಿಸಿದ ಜಮೀನಿನ ವಿಷಯದಲ್ಲಿ ಮಧ್ಯ ಪ್ರವೇಶಿಸಿ ಬೆದರಿಕೆ ಹಾಕಿ, 2 ಲಕ್ಷ ರೂ. ಬೇಡಿಕೆ ಇಟ್ಟು, 10 ಸಾವಿರ ರೂ.ಗಳನ್ನು ಬಲವಂತವಾಗಿ ಪಡೆದ ಆರೋಪದ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ