ಆ್ಯಪ್ನಗರ

ಶಿರಸಿ: ಬಸ್‌, ಓಮ್ನಿ ನಡುವೆ ಡಿಕ್ಕಿ, ಇಬ್ಬರ ಸಾವು

ಶಿರಸಿ ಸಮೀಪದ ಗುಡಿಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ ಸಂಭವಿಸಿದೆ. ಓಮ್ನಿ ಹಾಗೂ ಬಸ್‌ ನಡುವೆ ಮುಖಾಮುಖಿಯಾಗಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ನಜ್ಜುಗುಜ್ಜಾಗಿದೆ.

Vijaya Karnataka Web 25 Aug 2019, 8:12 pm
ಶಿರಸಿ: ಬಸ್ ಮತ್ತು ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Vijaya Karnataka Web ಅಪಘಾತ
ಅಪಘಾತ


ತಾಲೂಕಿನ ಗಡಿಹಳ್ಳಿ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕಸ್ತೂರಬಾ ನಗರದ ತನ್ವೀರ್ (17) ಹಾಗೂ ಮುಸ್ತಫಾ (19) ಮೃತರು.

ಇಲ್ಲಿಯವರೇ ಆದ ಸುಫಿಯಾನ್ (19), ಮಕ್ಬುಲ್ (19) ಫೈರೋಜ್ (19) ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿರಸಿಯಿಂದ ಬನವಾಸಿಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬನವಾಸಿಯಿಂದ ಬರುತ್ತಿದ್ದ ಓಮ್ನಿ ಕಾರು ನಡುವೆ ಡಿಕ್ಕಿಯಾಗಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ