ಹಳಿಯಾಳ : ರಕ್ತದಾನ ಶ್ರೇಷ್ಠ ದಾನ, ರಕ್ತದಾನದಿಂದ ಒಂದು ಜೀವ ಉಳಿಸಲು ಸಾಧ್ಯ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವುದರಿಂದ ಜೀವ ಉಳಿಸಲು ಸಾಧ್ಯ ಎಂದು ಹಳಿಯಾಳ ತಾಲೂಕಾ ಆರೋಗ್ಯಾಧಿಕಾರಿ ಡಾ.ರಮೇಶ ಕದಂ ತಿಳಿಸಿದರು.
ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಂ ಟ್ರಸ್ಟ್ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ತಾಲೂಕಾ ಆಸ್ಪತ್ರೆ ಹಳಿಯಾಳ, ಅರಣ್ಯ ತರಬೇತಿ ಕೇಂದ್ರ ತಟ್ಟಿಹಳ್ಳ. ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗವತಿ ಮತ್ತು ಪಂಡಿತ ಸಾರ್ವಜನಿಕ ಆಸ್ಪತ್ರೆ ಬ್ಲಡ್ ಬ್ಯಾಂಕ್ ಶಿರಸಿ ಇವರ ಸಹಯೋಗದಲ್ಲಿ ಶನಿವಾರ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ರಕ್ತದಾನದಿಂದ ಹಲವಾರು ಉಪಯೋಗಗಳು ಮನುಷ್ಯನಿಗೆ ದೊರೆಯಲಿವೆ. ವರ್ಷದಲ್ಲಿ ಎರಡು ಬಾರಿ ರಕ್ತದಾನ ಮಾಡಲು ಅವಕಾಶವಿದ್ದು, ಇದರ ಕುರಿತು ಜನರು ಅರಿವು ಮೂಡಿಸಿಕೊಳ್ಳಬೇಕಾಗಿದೆ ಎಂದರು.
ಅರಣ್ಯ ತರಬೇತಿ ಕೇಂದ್ರದ ವಲಯ ಅರಣ್ಯಾಧಿಕಾರಿ ಬಿರ್ಜೇಶ ವಿನಯಕುಮಾರ ಮಾತನಾಡಿ, ವಿದ್ಯಾಜ್ಞಾನ, ನೇತ್ರದಾನ ಮಾಡುವವರು ಹಲವರು ಇರುತ್ತಾರೆ. ಆದರೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರೆ, ಮಾನವೀಯ ಸಮಾಜ ಕಾಣಲು ಸಾಧ್ಯ ಎಂದರು. ಪಂಡಿತ ಸಾರ್ವಜನಿಕ ಆಸ್ಪತ್ರೆ ಬ್ಲಡ್ ಬ್ಯಾಂಕ್ ಶಿರಸಿ ವೈದ್ಯರಾದ ಡಾ.ಸುಮನ ಹೆಗಡೆ ಮಾತನಾಡಿ, ರಕ್ತದಾನದಿಂದ ಆಗುವ ಉಪಯೋಗಗಳು ಮತ್ತು ರಕ್ತದಾನಿಯ ಅರ್ಹತೆಗಳ ಬಗ್ಗೆ ವಿವರವಾಗಿ ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗವತಿ ಡಾ.ಶ್ರವಣ ಸೊಲ್ಲಾಪುರಿ, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚವ್ಹಾಣ ಹಾಗೂ ಅರಣ್ಯ ತರಬೇತಿ ಕೇಂದ್ರದ ಉಪನ್ಯಾಸಕರು ಉಪಸ್ಥಿತರಿದ್ದರು. ಅರಣ್ಯ ತರಬೇತಿ ಕೇಂದ್ರದ ಶಿಬಿರಾರ್ಥಿಗಳು, ಸಿಬ್ಬಂದಿ ವರ್ಗದವರು, ಭಾಗವಹಿಸಿ ಒಟ್ಟು 77 ಜನರು ರಕ್ತದಾನವನ್ನು ಮಾಡಿದರು.
ಹಳಿಯಾಳ ತಾಲೂಕು ಆಸ್ಪತ್ರೆಯ ಆರೋಗ್ಯ ಶಿಕ್ಷ ಣಾಧಿಕಾರಿ ಪ್ರಕಾಶ ಮಾನೆ, ಸಂಸ್ಥೆಯ ಯೋಜನಾಧಿಕಾರಿ ಸಂತೋಷ ಪರೀಟ, ಅರಣ್ಯ ತರಬೇತಿ ಕೇಂದ್ರದ ಶಿಬಿರಾರ್ಥಿ ಕಿರಣಕುಮಾರ ಸುರೇಶ ಗಾವಡೆ ಮತ್ತು ನಾರಾಯಣ ರಾಂದೇವಾಡಿ ಹಾಜರಿದ್ದರು.
ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಂ ಟ್ರಸ್ಟ್ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ತಾಲೂಕಾ ಆಸ್ಪತ್ರೆ ಹಳಿಯಾಳ, ಅರಣ್ಯ ತರಬೇತಿ ಕೇಂದ್ರ ತಟ್ಟಿಹಳ್ಳ. ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗವತಿ ಮತ್ತು ಪಂಡಿತ ಸಾರ್ವಜನಿಕ ಆಸ್ಪತ್ರೆ ಬ್ಲಡ್ ಬ್ಯಾಂಕ್ ಶಿರಸಿ ಇವರ ಸಹಯೋಗದಲ್ಲಿ ಶನಿವಾರ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ರಕ್ತದಾನದಿಂದ ಹಲವಾರು ಉಪಯೋಗಗಳು ಮನುಷ್ಯನಿಗೆ ದೊರೆಯಲಿವೆ. ವರ್ಷದಲ್ಲಿ ಎರಡು ಬಾರಿ ರಕ್ತದಾನ ಮಾಡಲು ಅವಕಾಶವಿದ್ದು, ಇದರ ಕುರಿತು ಜನರು ಅರಿವು ಮೂಡಿಸಿಕೊಳ್ಳಬೇಕಾಗಿದೆ ಎಂದರು.
ಅರಣ್ಯ ತರಬೇತಿ ಕೇಂದ್ರದ ವಲಯ ಅರಣ್ಯಾಧಿಕಾರಿ ಬಿರ್ಜೇಶ ವಿನಯಕುಮಾರ ಮಾತನಾಡಿ, ವಿದ್ಯಾಜ್ಞಾನ, ನೇತ್ರದಾನ ಮಾಡುವವರು ಹಲವರು ಇರುತ್ತಾರೆ. ಆದರೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರೆ, ಮಾನವೀಯ ಸಮಾಜ ಕಾಣಲು ಸಾಧ್ಯ ಎಂದರು. ಪಂಡಿತ ಸಾರ್ವಜನಿಕ ಆಸ್ಪತ್ರೆ ಬ್ಲಡ್ ಬ್ಯಾಂಕ್ ಶಿರಸಿ ವೈದ್ಯರಾದ ಡಾ.ಸುಮನ ಹೆಗಡೆ ಮಾತನಾಡಿ, ರಕ್ತದಾನದಿಂದ ಆಗುವ ಉಪಯೋಗಗಳು ಮತ್ತು ರಕ್ತದಾನಿಯ ಅರ್ಹತೆಗಳ ಬಗ್ಗೆ ವಿವರವಾಗಿ ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗವತಿ ಡಾ.ಶ್ರವಣ ಸೊಲ್ಲಾಪುರಿ, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚವ್ಹಾಣ ಹಾಗೂ ಅರಣ್ಯ ತರಬೇತಿ ಕೇಂದ್ರದ ಉಪನ್ಯಾಸಕರು ಉಪಸ್ಥಿತರಿದ್ದರು. ಅರಣ್ಯ ತರಬೇತಿ ಕೇಂದ್ರದ ಶಿಬಿರಾರ್ಥಿಗಳು, ಸಿಬ್ಬಂದಿ ವರ್ಗದವರು, ಭಾಗವಹಿಸಿ ಒಟ್ಟು 77 ಜನರು ರಕ್ತದಾನವನ್ನು ಮಾಡಿದರು.
ಹಳಿಯಾಳ ತಾಲೂಕು ಆಸ್ಪತ್ರೆಯ ಆರೋಗ್ಯ ಶಿಕ್ಷ ಣಾಧಿಕಾರಿ ಪ್ರಕಾಶ ಮಾನೆ, ಸಂಸ್ಥೆಯ ಯೋಜನಾಧಿಕಾರಿ ಸಂತೋಷ ಪರೀಟ, ಅರಣ್ಯ ತರಬೇತಿ ಕೇಂದ್ರದ ಶಿಬಿರಾರ್ಥಿ ಕಿರಣಕುಮಾರ ಸುರೇಶ ಗಾವಡೆ ಮತ್ತು ನಾರಾಯಣ ರಾಂದೇವಾಡಿ ಹಾಜರಿದ್ದರು.