ಆ್ಯಪ್ನಗರ

ಮಾರಿಕಾಂಬೆಗೆ ಸಂಸದ ಹೆಗಡೆ ಪೂಜೆ

ಶಿರಸಿ (ಉತ್ತರ ಕನ್ನಡ) : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ದಾಖಲೆಯ ಅಂತರದ ಗೆಲುವು ಸಾಧಿಸಿ ಗುರುವಾರ ಸಂಜೆ ತವರಿಗೆ ಆಗಮಿಸಿದ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಪಕ್ಷ ದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು.

Vijaya Karnataka 24 May 2019, 5:00 am
ಶಿರಸಿ (ಉತ್ತರ ಕನ್ನಡ) : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ದಾಖಲೆಯ ಅಂತರದ ಗೆಲುವು ಸಾಧಿಸಿ ಗುರುವಾರ ಸಂಜೆ ತವರಿಗೆ ಆಗಮಿಸಿದ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಪಕ್ಷ ದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು.
Vijaya Karnataka Web marigambe is the mp hegde worship
ಮಾರಿಕಾಂಬೆಗೆ ಸಂಸದ ಹೆಗಡೆ ಪೂಜೆ


ಕುಮಟಾದಿಂದ ಶಿರಸಿಯತ್ತ ಪಯಣ ಬೆಳೆಸಿದ ಹೆಗಡೆಗೆ ದಾರಿಯುದ್ದಕ್ಕೂ ಸಹಸ್ರಾರು ಅಭಿಮಾನಿಗಳು ಅಭಿನಂದಿಸಿದರು. ನಗರದ ನಿಲೇಕಣಿಗೆ ಆಗಮಿಸುತ್ತಿದ್ದಂತೆ ನೂರಾರು ಮಂದಿ ಹೂಹಾರ ಹಾಕಿ, ಕೈಕುಲುಕಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಸ್ಥಳೀಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದರು. ತದನಂತರ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹೆಗಡೆ, ''ಐತಿಹಾಸಿಕ ಗೆಲುವಿನತ್ತ ಬಿಜೆಪಿಯನ್ನು ಒಯ್ದಿರುವ ಎಲ್ಲ ಪ್ರಬುದ್ಧ ಮತದಾರರಿಗೆ ಅಭಿನಂದನೆ ಸಲ್ಲಿಸುವೆ. ಈ ಐತಿಹಾಸಿಕ ಗೆಲುವು ಈ ಮಣ್ಣಿಗೆ, ಜನತೆಗೆ ಹಾಗೂ ಮತದಾರರಿಗೆ ಸಲ್ಲಬೇಕಿದೆ. ಜೊತೆಯಲ್ಲಿ ಕಳೆದ ಆರು ಅವಧಿಯಲ್ಲಿ ಸಂಘಟನೆಯಲ್ಲಿ ಹೆಗಲ ಮೇಲೆ ಹೊತ್ತೊಯ್ದ ಕಾರ್ಯಕರ್ತರಿಗೆ ಈ ಗೆಲುವು ಸಲ್ಲಬೇಕು. ಈ ಐತಿಹಾಸಿಕ ಗೆಲುವನ್ನು ಮತದಾರರ ಪಾದಾರವಿಂದಗಳಿಗೆ ಅರ್ಪಿಸುತ್ತೇನೆ'' ಎಂದು ತಿಳಿಸಿದರು.

ಪತ್ನಿ ರೂಪಾ ಹೆಗಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಎಸಳೆ, ನಗರ ಘಟಕದ ಅಧ್ಯಕ್ಷ ಗಣಪತಿ ನಾಯ್ಕ, ಗ್ರಾಮೀಣ ಘಟಕದ ಅಧ್ಯಕ್ಷ ಆರ್‌.ವಿ.ಹೆಗಡೆ ಚಿಪಗಿ ಮುಂತಾದವರು ಪಾಲ್ಗೊಂಡರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ