ಕುಮಟಾ : ಚತುಷ್ಪಥ ನಿರ್ಮಾಣ ಕಾಮಗಾರಿಯಿಂದ ಮೂಲ ಸೌಕರ್ಯ ಕೊರತೆ ಅನುಭವಿಸುತ್ತಿರುವ ಬರ್ಗಿ ಜನರ ಬೇಡಿಕೆ ಪರಿಶೀಲನೆಗೆ ಜಿಲ್ಲಾಧಿಕಾರಿ ಹರೀಶ ಕುಮಾರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಜನರ ಅಗತ್ಯ ಬೇಡಿಕೆಗಳನ್ನು ಪ್ರಾಶಸ್ತತ್ರ್ಯದ ಮೇರೆಗೆ ಪೂರೈಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬರ್ಗಿ ಗ್ರಾಮ ಪಂಚಾಯಿತಿ ಎದುರು ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಚರಂಡಿ, ವಿದ್ಯುತ್ ದೀಪಗಳು ಅಲ್ಲದೇ ಶಾಲಾ -ಕಾಲೇಜುಗಳಿಗೆ ಹೆದ್ದಾರಿ ದಾಟಲು ಅನುಕೂಲವಾಗುವಂತೆ 'ವಾಕ್ ಪಾಥ್' ನಿರ್ಮಿಸಿ ಕೊಡುವಂತೆ ಬರ್ಗಿ ಗ್ರಾಮ ಪಂಚಾಯಿತಿ ಮತ್ತು ಸಾರ್ವಜನಿಕರು ಕಳೆದ 5 ವರ್ಷಗಳಿಂದ ಬೇಡಿಕೆ ಮುಂದಿಟ್ಟು ಹೋರಾಟ ಮಾಡುತ್ತಾ ಬಂದಿದ್ದಾರೆ.
ಆದರೆ ಚತುಷ್ಪಥ ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದರೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇಲ್ಲಿಯ ವರೆಗೆ ಜನರಿಗೆ ಹುಸಿ ಆಶ್ವಾಸನೆಗಳನ್ನು ಮಾತ್ರ ನೀಡುತ್ತಾ ಬಂದಿದ್ದಾರೆ. ಹೀಗಾಗಿ ವಾರದ ಹಿಂದೆ ಇಲ್ಲಿಯ ಜನರು ಕುಮಟಾ ತಹಸೀಲ್ದಾರರಿಗೆ ಭೇಟಿ ಮಾಡಿ ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಜನರ ಬೇಡಿಕೆಗಳನ್ನು ಆಲಿಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನವೀನ ಜೊತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು ಜನರ ಬೇಡಿಕೆ ನ್ಯಾಯಯುತವಾಗಿದ್ದು, ಹಂತ ಹಂತವಾಗಿ ಬೇಡಿಕೆಗಳನ್ನು ಪೂರೈಸುವಂತೆ ಆದೇಶಿಸಿದರು.
ಚತುಷ್ಪಥ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, 5 ವರ್ಷ ಕಳೆದರೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮೂಲ ಸೌಕರ್ಯ ಒದಗಿಸಿ ಕೊಡದಿದ್ದರಿಂದ ಅವರ ಮೇಲಿನ ವಿಶ್ವಾಸವನ್ನು ಜನರು ಕಳೆದುಕೊಂಡಿದ್ದಾರೆ. ಹೀಗಾಗಿ ಇನ್ನಷ್ಟು ಸಮಯ ಕಾಮಗಾರಿ ಮಾಡಲು ಕಳೆದರೆ ಹೋರಾಟ ನಿಶ್ಚಿತ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಾ ಪಟಗಾರ ತಿಳಿಸಿದ್ದಾರೆ. ಉಪವಿಭಾಗಾಧಿಕಾರಿ ಅಜೀತ್, ಮೀನುಗಾರರ ಮುಖಂಡ ಶಿವರಾಮ ಹರಿಕಂತ್ರ ಉಪಸ್ಥಿತರಿದ್ದರು.
ಬರ್ಗಿ ಗ್ರಾಮ ಪಂಚಾಯಿತಿ ಎದುರು ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಚರಂಡಿ, ವಿದ್ಯುತ್ ದೀಪಗಳು ಅಲ್ಲದೇ ಶಾಲಾ -ಕಾಲೇಜುಗಳಿಗೆ ಹೆದ್ದಾರಿ ದಾಟಲು ಅನುಕೂಲವಾಗುವಂತೆ 'ವಾಕ್ ಪಾಥ್' ನಿರ್ಮಿಸಿ ಕೊಡುವಂತೆ ಬರ್ಗಿ ಗ್ರಾಮ ಪಂಚಾಯಿತಿ ಮತ್ತು ಸಾರ್ವಜನಿಕರು ಕಳೆದ 5 ವರ್ಷಗಳಿಂದ ಬೇಡಿಕೆ ಮುಂದಿಟ್ಟು ಹೋರಾಟ ಮಾಡುತ್ತಾ ಬಂದಿದ್ದಾರೆ.
ಆದರೆ ಚತುಷ್ಪಥ ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದರೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇಲ್ಲಿಯ ವರೆಗೆ ಜನರಿಗೆ ಹುಸಿ ಆಶ್ವಾಸನೆಗಳನ್ನು ಮಾತ್ರ ನೀಡುತ್ತಾ ಬಂದಿದ್ದಾರೆ. ಹೀಗಾಗಿ ವಾರದ ಹಿಂದೆ ಇಲ್ಲಿಯ ಜನರು ಕುಮಟಾ ತಹಸೀಲ್ದಾರರಿಗೆ ಭೇಟಿ ಮಾಡಿ ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಜನರ ಬೇಡಿಕೆಗಳನ್ನು ಆಲಿಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನವೀನ ಜೊತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು ಜನರ ಬೇಡಿಕೆ ನ್ಯಾಯಯುತವಾಗಿದ್ದು, ಹಂತ ಹಂತವಾಗಿ ಬೇಡಿಕೆಗಳನ್ನು ಪೂರೈಸುವಂತೆ ಆದೇಶಿಸಿದರು.
ಚತುಷ್ಪಥ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, 5 ವರ್ಷ ಕಳೆದರೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮೂಲ ಸೌಕರ್ಯ ಒದಗಿಸಿ ಕೊಡದಿದ್ದರಿಂದ ಅವರ ಮೇಲಿನ ವಿಶ್ವಾಸವನ್ನು ಜನರು ಕಳೆದುಕೊಂಡಿದ್ದಾರೆ. ಹೀಗಾಗಿ ಇನ್ನಷ್ಟು ಸಮಯ ಕಾಮಗಾರಿ ಮಾಡಲು ಕಳೆದರೆ ಹೋರಾಟ ನಿಶ್ಚಿತ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಾ ಪಟಗಾರ ತಿಳಿಸಿದ್ದಾರೆ. ಉಪವಿಭಾಗಾಧಿಕಾರಿ ಅಜೀತ್, ಮೀನುಗಾರರ ಮುಖಂಡ ಶಿವರಾಮ ಹರಿಕಂತ್ರ ಉಪಸ್ಥಿತರಿದ್ದರು.