ಆ್ಯಪ್ನಗರ

ತ್ಯಾಜ್ಯ ವಿಲೇವಾರಿ ಸಮರ್ಪಕ ಅನುಷ್ಠಾನಕ್ಕೆ ಸಭೆ

ಗೋಕರ್ಣ: ಸ್ವಚ್ಛಮೇವ ಜಯತೇ, ಸ್ವಚ್ಛ ಭಾರತ ಮಿಶನ್‌ ಯೋಜನೆಯಡಿ ಜೂ. 11 ರಿಂದ ಜು. 10ರ ವರೆಗೆ ಗೋಕರ್ಣ ಗ್ರಾಪಂ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಸಮರ್ಪಕ ಅನುಷ್ಠಾನ ಕುರಿತು ಗೋಕರ್ಣ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಭೆ ನಡೆಯಿತು.

Vijaya Karnataka 11 Jun 2019, 5:00 am
ಗೋಕರ್ಣ: ಸ್ವಚ್ಛಮೇವ ಜಯತೇ, ಸ್ವಚ್ಛ ಭಾರತ ಮಿಶನ್‌ ಯೋಜನೆಯಡಿ ಜೂ. 11 ರಿಂದ ಜು. 10ರ ವರೆಗೆ ಗೋಕರ್ಣ ಗ್ರಾಪಂ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಸಮರ್ಪಕ ಅನುಷ್ಠಾನ ಕುರಿತು ಗೋಕರ್ಣ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಭೆ ನಡೆಯಿತು.
Vijaya Karnataka Web KWR-10 GKN 1 B


ಈ ಯೋಜನೆಯಡಿ ಜೂ.11ರಂದು ಗ್ರಾಪಂ ಆವರಣ, ಶಾಲಾ ಆವರಣಗಳಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಲಿದೆ.

ಸಭೆಯಲ್ಲಿ ಅಥಿತಿಯಾಗಿ ಆಗಮಿಸಿದ್ದ ಕಾರವಾರ ಜಿಲ್ಲಾ ಸಂಯೋಜಕ (ಎಚ್‌.ಆರ್‌.ಡಿ) ಸೂರ್ಯ ನಾರಾಯಣ ಭಟ್‌ ಮಾತನಾಡಿ, ಸ್ವಚ್ಛ ಭಾರತ ಮಿಷನ್‌ ಅಡಿ ನಡೆಯುತ್ತಿವ ಈ ಕಾರ್ಯಕ್ರಮಕ್ಕೆ ಜನರೆಲ್ಲರೂ ಸ್ಪಂದಿಸಬೇಕು. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು ಎಂದರು. ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಮಹಾಲಕ್ಷ್ಮೀ ಸಣ್ಬಡ್ತಿ, ತಾಪಂ ಸದಸ್ಯ ಮಹೇಶ ಶೆಟ್ಟಿ, ಶಾಲೆ ಮುಖ್ಯಾಧ್ಯಾಪಕರು, ಹೊಟೇಲ್‌ ಮಾಲೀಕರು, ಅಂಗನವಾಡಿ ಕಾರ್ಯಕರ್ತರು, ತಾಪಂ ಸದಸ್ಯರು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ