ಆ್ಯಪ್ನಗರ

ಶಾಸಕಿಗೆ ಬೆದರಿಕೆ: ಇಬ್ಬರ ವಿರುದ್ಧ ದೂರು

ಕಾರವಾರ : ಲೋಕಸಭೆ ಚುನಾವಣೆ ಮತದಾನದ ದಿನ ಶಾಸಕಿ ರೂಪಾಲಿ ನಾಯ್ಕ ಸಂಚರಿಸುತ್ತಿದ್ದ ವಾಹನವನ್ನು ಅಕ್ರಮವಾಗಿ ತಡೆದು ನಿಲ್ಲಿಸಿ ಬೆದರಿಕೆ ಒಡ್ಡಿದ್ದಾರೆ ಎಂದು ಕಿಶನ್‌ ಕುವಳೇಕರ್‌ ಹಾಗೂ ದರ್ಶನ ಮಾಜಾಳಿಕರ್‌ ಎಂಬುವವರ ವಿರುದ್ಧ ಶಾಸಕರ ಆಪ್ತ ಕಾರ್ಯದರ್ಶಿ ಗುರುಪ್ರಸಾದ ನಾಯ್ಕ ಕಾರವಾರ ನಗರ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದಾರೆ.

Vijaya Karnataka 26 Apr 2019, 5:00 am
ಕಾರವಾರ : ಲೋಕಸಭೆ ಚುನಾವಣೆ ಮತದಾನದ ದಿನ ಶಾಸಕಿ ರೂಪಾಲಿ ನಾಯ್ಕ ಸಂಚರಿಸುತ್ತಿದ್ದ ವಾಹನವನ್ನು ಅಕ್ರಮವಾಗಿ ತಡೆದು ನಿಲ್ಲಿಸಿ ಬೆದರಿಕೆ ಒಡ್ಡಿದ್ದಾರೆ ಎಂದು ಕಿಶನ್‌ ಕುವಳೇಕರ್‌ ಹಾಗೂ ದರ್ಶನ ಮಾಜಾಳಿಕರ್‌ ಎಂಬುವವರ ವಿರುದ್ಧ ಶಾಸಕರ ಆಪ್ತ ಕಾರ್ಯದರ್ಶಿ ಗುರುಪ್ರಸಾದ ನಾಯ್ಕ ಕಾರವಾರ ನಗರ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದಾರೆ.
Vijaya Karnataka Web mla threatens complaint against two
ಶಾಸಕಿಗೆ ಬೆದರಿಕೆ: ಇಬ್ಬರ ವಿರುದ್ಧ ದೂರು


ಮತದಾನದ ಸಂದರ್ಭದಲ್ಲಿ ಶಾಸಕಿ ಕಾರವಾರದಿಂದ ಅಂಕೋಲಾ ಕಡೆ ಕಾರಿನಲ್ಲಿ ತೆರಳುತ್ತಿದ್ದಾಗ ಜೆಡಿಎಸ್‌ ಕಾರ್ಯಕರ್ತರೆಂದು ಹೇಳಿಕೊಂಡ ಇವರಿಬ್ಬರೂ ಕಾರಿಗೆ ಅಡ್ಡಗಟ್ಟಿ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಹಿಂದೆಯೂ ಕೂಡ ಅನೇಕ ಬಾರಿ ಇದೇ ರೀತಿಯ ಘಟನೆಗಳು ನಡೆದಿದ್ದು, ಪೊಲೀಸ್‌ ಇಲಾಖೆ ಗಮನಕ್ಕೆ ತರಲಾಗಿದೆ. ಈ ಘಟನೆಗಳ ಹಿಂದೆ ಬೇರೆ ಯಾರದ್ದೋ ಕೈವಾಡವಿರುವ ಶಂಕೆ ಇದೆ. ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರತಿಭಟನೆಯ ಎಚ್ಚರಿಕೆ: ಬಿಜೆಪಿಯ ಶಾಸಕರು, ಜನಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡಲು ಆಗದಂತಹ ವಾತಾವರಣವನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಪಕ್ಷದ ಮಾಧ್ಯಮ ಸಂಚಾಲಕ ನಾಗರಾಜ ನಾಯಕ ಆರೋಪಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಶಾಸಕಿ ರೂಪಾಲಿ ನಾಯ್ಕ ಅವರಿಗೆ ಬೆದರಿಕೆಯೊಡ್ಡಿ ಹಲ್ಲೆ ಮಾಡಲು ಯತ್ನಿಸಲಾಗಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಪP್ಷÜ ಶಾಸಕಿಗೆ ಬೆಂಬಲವಾಗಿ ನಿಲ್ಲುತ್ತದೆ. ಇಂತಹ ಪ್ರಕರಣಗಳು ಮುಂದುವರಿದರೆ ಪP್ಷÜದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ'' ಎಂದು ಎಚ್ಚರಿಕೆ ನೀಡಿದರು.

''ಈ ಹಿಂದೆಯೂ ರೂಪಾಲಿ ಅವರಿಗೆ ಯಾರೋ ಕರೆ ಮಾಡಿ ಬೆದರಿಸಿದ್ದರು. ರಾತ್ರಿ ಅವರ ಕಾರನ್ನು ಹಿಂಬಾಲಿಸಿ ಭಯದ ವಾತಾವರಣ ಸೃಷ್ಟಿಸಲು ಯತ್ನಿಸಲಾಗಿತ್ತು. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಮನಕ್ಕೂ ತರಲಾಗಿತ್ತು. ಇಂತಹ ಪ್ರಕರಣಗಳು ಮುಂದುವರಿಯದಂತೆ ಸರಕಾರ ಗಮನ ಹರಿಸಬೇಕು'' ಎಂದರು.

''ಕುಮಟಾ ಶಾಸಕ ದಿನಕರ ಶೆಟ್ಟಿ ಚುನಾವಣಾ ಭಾಷಣದಲ್ಲಿ ಜೆಡಿಎಸ್‌ ವರಿಷ್ಠ ದೇವೇಗೌಡ ಅವರನ್ನು ಟೀಕಿಸಿದ್ದಕ್ಕೆ ಜಾತಿಯ ಬಣ್ಣ ಕೊಡಲು ವಿರೋಧಿಗಳು ಯತ್ನಿಸಿದ್ದಾರೆ. ಇಂಥಹ ಘಟನೆಗಳು ಇನ್ನು ಮುಂದೆ ನಡೆದರೆ ಪ್ರತಿಭಟನೆ ನಡೆಸಲಾಗುತ್ತದೆ'' ಎಂದು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ