ಆ್ಯಪ್ನಗರ

ಮುಂಗಾರು ಮಳೆ ಚುರುಕು:ವಿದ್ಯುತ್‌ ವ್ಯತ್ಯಯ

ಯಲ್ಲಾಪುರ : ತಾಲೂಕಿನಲ್ಲಿ ಮುಂಗಾರು ಮಳೆ ಗುರುವಾರದಿಂದ ಮತ್ತಷ್ಟು ಚುರುಕುಗೊಂಡಿದೆ. ಹಗಲು-ರಾತ್ರಿ ಬಿಡುವಿಲ್ಲದೇ ನಿರಂತರವಾಗಿ ಸುರಿಯುತ್ತಿದೆ. ಜೋರಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನ ಅಲ್ಲಲ್ಲಿ ಮರ ಮುರಿದು ಬಿದ್ದ ಘಟನೆಗಳು ನಡೆದಿವೆ. ಪದೇಪದೆ ವಿದ್ಯುತ್‌ ಸಂಪರ್ಕ ವ್ಯತ್ಯಯವಾಗಿ ಜನರು ಪರದಾಡುವಂತಾಯಿತು.

Vijaya Karnataka 14 Jun 2019, 5:00 am
ಯಲ್ಲಾಪುರ : ತಾಲೂಕಿನಲ್ಲಿ ಮುಂಗಾರು ಮಳೆ ಗುರುವಾರದಿಂದ ಮತ್ತಷ್ಟು ಚುರುಕುಗೊಂಡಿದೆ. ಹಗಲು-ರಾತ್ರಿ ಬಿಡುವಿಲ್ಲದೇ ನಿರಂತರವಾಗಿ ಸುರಿಯುತ್ತಿದೆ. ಜೋರಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನ ಅಲ್ಲಲ್ಲಿ ಮರ ಮುರಿದು ಬಿದ್ದ ಘಟನೆಗಳು ನಡೆದಿವೆ. ಪದೇಪದೆ ವಿದ್ಯುತ್‌ ಸಂಪರ್ಕ ವ್ಯತ್ಯಯವಾಗಿ ಜನರು ಪರದಾಡುವಂತಾಯಿತು.
Vijaya Karnataka Web monsoon showers are active power variance
ಮುಂಗಾರು ಮಳೆ ಚುರುಕು:ವಿದ್ಯುತ್‌ ವ್ಯತ್ಯಯ


ಪಟ್ಟಣದ ಕಾಳಮ್ಮನಗರ, ರವೀಂದ್ರ ನಗರ ಸೇರಿದಂತೆ ವಿವಿಧ ವಾರ್ಡುಗಳಲ್ಲಿ ಮಳೆ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ಘಟನೆಯೂ ವರದಿಯಾಗಿದೆ. ಈ ಪ್ರದೇಶಗಳಲ್ಲಿ ಅಸಮರ್ಪಕ ಗಟಾರ ಕಾಮಗಾರಿಯಿಂದ ಇಂತಹ ಅವ್ಯವಸ್ಥೆ ಇದ್ದು, ಮಳೆ ನೀರು ಚರಂಡಿಗಳಲ್ಲಿ ಹರಿಯುವ ಬದಲು ಮನೆಯೊಳಕ್ಕೆ ನುಗ್ಗುತ್ತಿದೆ. ಈ ಕುರಿತು ಸ್ಥಳೀಯ ಆಡಳಿತದವರು ಗಮನ ನೀಡಿ ಇಂತಹ ಸಮಸ್ಯೆಯನ್ನು ಪರಿಹರಿಸಬೇಕು ಎಂಬ ಆಗ್ರಹ ಆ ಭಾಗದ ಜನರಿಂದ ಕೇಳಿಬಂದಿದೆ. ರಭಸದ ಮಳೆಯಿಂದಾಗಿ ಪಟ್ಟಣ ವ್ಯಾಪ್ತಿಯ ಹಲವು ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು. ಪಟ್ಟಣದ ತಟಗಾರ್‌ ಕ್ರಾಸ್‌ ರಸ್ತೆಯಲ್ಲಿ ಮಳೆ ನೀರು ರಸ್ತೆಯ ಮೇಲೆ ನಿಂತು ಪ್ರಯಾಣಿಕರು ಪರದಾಡುವಂತಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ