ಆ್ಯಪ್ನಗರ

ರಾಷ್ಟ್ರೀಯ ಪೋಷಣಾ ಅಭಿಯಾನ ಜಾಗೃತಿ ಜಾಥಾ

ಕಾರವಾರ : ತಾಲೂಕಿನ ಅಮದಳ್ಳಿಯ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣಾ ಅಭಿಯಾನ ಶುಕ್ರವಾರ ನಡೆಯಿತು.

Vijaya Karnataka 21 Sep 2019, 5:00 am
ಕಾರವಾರ : ತಾಲೂಕಿನ ಅಮದಳ್ಳಿಯ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣಾ ಅಭಿಯಾನ ಶುಕ್ರವಾರ ನಡೆಯಿತು.
Vijaya Karnataka Web national nutrition campaign awareness jatha
ರಾಷ್ಟ್ರೀಯ ಪೋಷಣಾ ಅಭಿಯಾನ ಜಾಗೃತಿ ಜಾಥಾ


ಆರೋಗ್ಯ ಇಲಾಖೆ, ಅಮದಳ್ಳಿ ಗ್ರಾ.ಪಂ. ಸಹಯೋಗದಲ್ಲಿಈ ಕಾರ್ಯಕ್ರಮವನ್ನು ಶಿಶು ಅಭಿವೃದ್ದಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಹೆಣ್ಣು ಮಕ್ಕಳ ಸಮಗ್ರ ಪೋಷಣೆಗಾಗಿ ಕೇಂದ್ರ ಸರಕಾರವು ಯೋಜನೆಯ ಪ್ರಚಾರ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಂಡಿದೆ.

ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಎಸ್‌.ಆರ್‌.ಜೋಶಿ ರಾಷ್ಟ್ರೀಯ ಪೋಷಣ ಅಭಿಯಾನದ ಯೋಜನೆಯ ಕುರಿತು ಮಾಹಿತಿ ನೀಡಿದರು. ವೈದ್ಯಾಧಿಕಾರಿ ಡಾ.ಪ್ರಿಯಾಂಕಾ ನಾಯ್ಕ ಆರೋಗ್ಯ ಇಲಾಖೆಯಿಂದ ಸಿಗುವ ಸೇವೆ ಹಾಗೂ ಆಹಾರದಲ್ಲಿನ ಪೌಷ್ಟಿಕಾಂಶದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಸದಸ್ಯ ಶ್ರೀಧರ ತಳೇಕರ ವಹಿಸಿದ್ದರು. ಗ್ರಾ.ಪಂ. ಸದಸ್ಯ ಅಶೋಕ ತೆಂಡೂಲ್ಕರ್‌, ಬಾಲಿಕಾ ಸಮಿತಿ ಅಧ್ಯಕ್ಷೆ ಅಕ್ಷರಾ ಪೆಡ್ನೇಕರ್‌, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿರಾಷ್ಟೀ್ರಯ ಪೋಷಣಾ ಅಭಿಯಾನದ ಕುರಿತಾಗಿ ಗ್ರಾಮದ ಮುಖ್ಯ ರಸ್ತೆಯಲ್ಲಿಜಾಗೃತಿ ಜಾಥಾ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ