ಆ್ಯಪ್ನಗರ

ನಿಫಾ ವೈರಸ್‌: ಶಾಲೆಗಳಲ್ಲಿ ಜಾಗೃತಿ ಮೂಡಿಸಿ

ಕಾರವಾರ : ಬಾವಲಿಯಿಂದ ಹರಡಬಹುದಾದ ಮಾರಣಾಂತಿಕ ನಿಫಾ ವೈರಸ್‌ ಬಗ್ಗೆ ಶಾಲೆಗಳಲ್ಲಿ ಜಾಗೃತಿ ಮೂಡಿಸುವಂತೆ ಜಿ.ಪಂ. ಸಿಇಒ ಎಂ.ರೋಷನ್‌ ಸೂಚಿಸಿದ್ದಾರೆ.

Vijaya Karnataka 15 Jun 2019, 5:00 am
ಕಾರವಾರ : ಬಾವಲಿಯಿಂದ ಹರಡಬಹುದಾದ ಮಾರಣಾಂತಿಕ ನಿಫಾ ವೈರಸ್‌ ಬಗ್ಗೆ ಶಾಲೆಗಳಲ್ಲಿ ಜಾಗೃತಿ ಮೂಡಿಸುವಂತೆ ಜಿ.ಪಂ. ಸಿಇಒ ಎಂ.ರೋಷನ್‌ ಸೂಚಿಸಿದ್ದಾರೆ.
Vijaya Karnataka Web nifa virus make awareness in schools
ನಿಫಾ ವೈರಸ್‌: ಶಾಲೆಗಳಲ್ಲಿ ಜಾಗೃತಿ ಮೂಡಿಸಿ


ನಿಫಾ ವೈರಾಣು ಕುರಿತು ಶುಕ್ರವಾರ ಅಂತರ್‌ ಇಲಾಖಾ ಸಹಕಾರ ಸಮಿತಿ ಸಭೆ ನಡೆಸಿದ ಅವರು, ನಿಫಾ ಕಾಯಿಲೆ ನಮ್ಮ ರಾಜ್ಯದಲ್ಲಿ ವರದಿಯಾಗಿಲ್ಲ. ಆದರೂ ಕಾಯಿಲೆ ಹರಡಬಹುದಾದ ಕಾರಣ, ಪರಿಣಾಮಗಳ ಮುಂಜಾಗ್ರತೆಗಾಗಿ ಜಾಗೃತಿಯ ಅವಶ್ಯವಿದೆ ಎಂದರು.

ಸಾರ್ವಜನಿಕ ಶಿಕ್ಷ ಣ ಇಲಾಖೆಯ ಎರಡೂ ಶೈಕ್ಷ ಣಿಕ ಜಿಲ್ಲೆಯಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಬೇಕು. ಕೇವಲ ನಿಫಾ ಅಲ್ಲದೇ ವಿವಿಧ ಸಾಂಕ್ರಾಮಿಕ ಕಾಯಿಲೆ ಬಗ್ಗೆ ಸಂಬಂಧಿಸಿದ ವೈದ್ಯಾಧಿಕಾರಿಗಳ ಮೂಲಕ ಪ್ರಾತ್ಯಕ್ಷಿಕೆ ಸಹಿತ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತರಿಗೆ ಕೂಡ ಈ ಬಗ್ಗೆ ಅರಿವು ಮೂಡಿಸಿದರೆ ಸ್ಥಳೀಯ ಮಟ್ಟದಲ್ಲಿ ಜಾಗೃತಿ ವಹಿಸುವುದಲ್ಲದೇ ಮಕ್ಕಳಲ್ಲಿ ಅರಿವು ಮೂಡಿಸಬಹುದಾಗಿದೆ ಎಂದರು. ಸರಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಸಾಂಕ್ರಾಮಿಕ ರೋಗ ಲಕ್ಷ ಣಗಳು ಹಾಗೂ ಪರಿಹಾರ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.ಯಾವುದೇ ಕಾಯಿಲೆಗಳು ಪತ್ತೆಯಾಗುವ ಮುನ್ನ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಬೇಕು. ನಮ್ಮ ಜಿಲ್ಲೆ ಅಥವಾ ರಾಜ್ಯದಲ್ಲಿ ನಿಫಾ ವೈರಾಣು ಇಲ್ಲದಿದ್ದರೂ, ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಅಲ್ಲದೇ ಪಶುಪಾಲನಾ ಇಲಾಖೆ ಹಂದಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಕಣೆ ಮಾಡುತ್ತಿರುವ ಜಿಲ್ಲೆಯ ವಿವಿಧ ಪ್ರದೇಶದಲ್ಲಿ ರಕ್ತದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಎನ್‌. ಅಶೋಕ್‌ ಕುಮಾರ್‌, ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿ ಡಾ.ವಿನೋದ್‌ ಬೂತೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ