ಆ್ಯಪ್ನಗರ

ಅಂಗನವಾಡಿಗಳ ಖಾಸಗೀಕರಣ ಬೇಡ

ಭಟ್ಕಳ : ಶಿಶು ಹಾಗೂ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಕಳೆದ 43 ವರ್ಷಗಳಿಂದ ಜಾರಿಯಲ್ಲಿರುವ ಅಂಗನವಾಡಿಗಳನ್ನು ಕೇಂದ್ರ ಸರಕಾರ ಖಾಸಗೀಕರಣ ಮಾಡಲು ಮುಂದಾಗಿದ್ದು, ಇದನ್ನು ನಾವು ಪ್ರಶ್ನಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ರಿ) ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌.ಸುನಂದಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka 20 Jan 2019, 5:00 am
ಭಟ್ಕಳ : ಶಿಶು ಹಾಗೂ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಕಳೆದ 43 ವರ್ಷಗಳಿಂದ ಜಾರಿಯಲ್ಲಿರುವ ಅಂಗನವಾಡಿಗಳನ್ನು ಕೇಂದ್ರ ಸರಕಾರ ಖಾಸಗೀಕರಣ ಮಾಡಲು ಮುಂದಾಗಿದ್ದು, ಇದನ್ನು ನಾವು ಪ್ರಶ್ನಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ರಿ) ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌.ಸುನಂದಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web KWR-19BKL1


ಅವರು ಭಟ್ಕಳ ಕಮಲಾವತಿ ರಾಮನಾಥ ಸಭಾಗೃಹದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 8ನೇ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿರುವ ಕೇಂದ್ರ ಸರಕಾರ ಅಂಗನವಾಡಿಗಳಿಗೆ ನೀಡುತ್ತಿರುವ ಅನುದಾನವನ್ನು ಗಣನೀಯ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಅಕ್ಷ ರ ದಾಸೋಹ ಯೋಜನೆಯನ್ನೂ ಕೇಂದ್ರ ನಿರ್ಲಕ್ಷಿಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಘೋರ ಪ್ರಮಾದವಾಗಿದೆ. ಹಸಿವಿನ ಸೂಚ್ಯಂಕ ಏರುತ್ತಿದ್ದರೂ ಕೇಂದ್ರ ಸಚಿವೆ ಮೇನಕಾ ಗಾಂಧಿ ಫಲಾನುಭವಿಗಳ ಖಾತೆಗೆ ನಗದನ್ನು ನೇರವಾಗಿ ತಲುಪಿಸುವ ಮಾತನ್ನು ಆಡುತ್ತ ವೋಟ್‌ ಬ್ಯಾಂಕ್‌ ರಾಜಕಾರಣಕ್ಕೆ ಮೊರೆ ಹೋಗಿದ್ದಾರೆ. ಪರೋಕ್ಷ ತೆರಿಗೆ ಪದ್ಧತಿಯಿಂದ ಜನ ಸಾಮಾನ್ಯರು ಹೈರಾಣಾಗುತ್ತಿದ್ದರೆ, ಕಾಪೋರ್‍ರೇಟ್‌ ಕಂಪನಿಗಳ 2,75,000 ಕೋ. ರೂ. ತೆರಿಗೆ ಮನ್ನಾಮಾಡಿ ಸರಕಾರದ ಒಲವು ನಿಲುವುಗಳನ್ನು ಬಹಿರಂಗಗೊಳಿಸಲಾಗಿದೆ. ರಾಜ್ಯ ಸರಕಾರವೂ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವ ಪ್ರಯತ್ನ ನಡೆಸುತ್ತಿದ್ದು, ಅಂಗನವಾಡಿ ಕೇಂದ್ರಗಳ ನಿರ್ಲಕ್ಷ ್ಯಕ್ಕೆ ಸಾಕ್ಷಿಯಾಗಿದೆ. ಸುಪ್ರೀಂ ಕೋರ್ಟ್‌ ಹೇಳಿರುವ ಸಮಾನ ಕೆಲಸಕ್ಕೆ ಸಮಾನ ಕೂಲಿ ಜಾರಿಯಾಗದ ಕುರಿತು ಅಂಗನವಾಡಿ ಕಾರ್ಯಕರ್ತರೆಲ್ಲರೂ ಹೋರಾಟಕ್ಕಿಳಿಯುವ ಅನಿವಾರ್ಯತೆ ಬಂದಿದೆ ಎಂದರು.

ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಯಮುನಾ ಗಾಂವಕರ್‌ ಅಧ್ಯಕ್ಷ ತೆ ವಹಿಸಿದ್ದರು. ಸಿಐಟಿಯು ಜಿಲ್ಲಾ ಸಮಿತಿಯ ಅಧ್ಯಕ್ಷ ತಿಲಕ ಗೌಡ, ಪ್ರಧಾನ ಕಾರ್ಯದರ್ಶಿ ಸಿ.ಆರ್‌.ಶ್ಯಾನಭಾಗ, ಉತ್ತರಕನ್ನಡ ಪ್ರಾಂತ ರೈತ ಸಂಘದ ಅಧ್ಯಕ್ಷ ಶಾಂತಾರಾಮ ನಾಯಕ್‌, ಗಂಗಾ ನಾಯ್ಕ, ಗೀತಾ ನಾಯ್ಕ, ರತ್ನ ದೀಪಾ, ಕವಿತಾ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾ ಭಟ್‌ ಪ್ರಾಸ್ತಾವಿಕ ಮಾತನಾಡಿದರು. ಪುಷ್ಪಾವತಿ ನಾಯ್ಕ ಸ್ವಾಗತಿಸಿದರು. ಇದಕ್ಕೂ ಪೂರ್ವದಲ್ಲಿ ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಅಂಗನವಾಡಿ ಕಾರ್ಯಕರ್ತರು ಸಮ್ಮೇಳನದ ಮೆರವಣಿಗೆ ನಡೆಸಿದರು. ಸವಿತಾ ತನ್ಮಡಗಿ ವಂದಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ