ಆ್ಯಪ್ನಗರ

ರೈಲು ಮಾರ್ಗಕ್ಕೆ ಸರ್ವೇ ಕಾರ‍್ಯಕ್ಕೆ ವಿರೋಧ

ಕಾರವಾರ : ಅಂಕೋಲಾ ತಾಲೂಕಿನ ಕೇಣಿ ಮತ್ತು ಬಡಗೇರಿ ಗ್ರಾಮಗಳ ಜನವಸತಿ ಪ್ರದೇಶದಲ್ಲಿರೈಲ್ವೇ ಮಾರ್ಗಕ್ಕೆ ಸರ್ವೇ ಕಾರ್ಯ ನಡೆಸಿರುವುದನ್ನು ವಿರೋಧಿಸಿ ಆ ಭಾಗದ ನಿವಾಸಿಗಳು ಜಿಲ್ಲಾಧಿಕಾರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದರು.

Vijaya Karnataka 24 Nov 2019, 5:00 am
ಕಾರವಾರ : ಅಂಕೋಲಾ ತಾಲೂಕಿನ ಕೇಣಿ ಮತ್ತು ಬಡಗೇರಿ ಗ್ರಾಮಗಳ ಜನವಸತಿ ಪ್ರದೇಶದಲ್ಲಿರೈಲ್ವೇ ಮಾರ್ಗಕ್ಕೆ ಸರ್ವೇ ಕಾರ್ಯ ನಡೆಸಿರುವುದನ್ನು ವಿರೋಧಿಸಿ ಆ ಭಾಗದ ನಿವಾಸಿಗಳು ಜಿಲ್ಲಾಧಿಕಾರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದರು.
Vijaya Karnataka Web opposition to railway surveys
ರೈಲು ಮಾರ್ಗಕ್ಕೆ ಸರ್ವೇ ಕಾರ‍್ಯಕ್ಕೆ ವಿರೋಧ


ಈಗಾಗಲೇ ಸೀಬರ್ಡ್‌ ನೌಕಾನೆಲೆ ಯೋಜನೆಗೆ ನಮ್ಮ ಬಹುತೇಕ ಕೃಷಿ ಭೂಮಿ ವಶಪಡಿಸಿಕೊಳ್ಳಲಾಗಿದೆ. ಈಗ ಅಳಿದುಳಿದ ಭೂಮಿಯಲ್ಲಿನಾವು ಅಡಕೆ ತೆಂಗಿನ ಮರಗಳನ್ನು ಬೆಳೆಸಿದ್ದೇವೆ. ಅವು ಈಗ ಫಲ ಬರುವ ಹಂತದಲ್ಲಿರುವಾಗ ರೈಲ್ವೇ ಮಾರ್ಗ ನಿರ್ಮಾಣಕ್ಕೆ ಸಂಬಂಧಪಟ್ಟವರು ನಮ್ಮ ಊರಿನ ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶದ ನಟ್ಟ ನಡುವೆ ಸರ್ವೇ ಕಾರ್ಯ ನಡೆಸಿದ್ದಾರೆ.

ಬಾಳೆಗುಳಿಯಿಂದ ಜಮಗೋಡು ಮೂಲಕ ಬೇಲೆಕೇರಿ ಬಂದರಿಗೆ ಸಂಪರ್ಕಿಸುವ ರೈಲ್ವೇ ಮಾರ್ಗ ನಿರ್ಮಾಣದ ಬಗ್ಗೆ ಸರ್ವೆ ನಡೆಸುತ್ತಿದ್ದಾರೆ ಎಂಬುದು ನಾವು ಈ ಕುರಿತು ವಿಚಾರಿಸಿದಾಗ ತಿಳಿದು ಬಂದಿದೆ.

ಈಗಾಗಲೇ ಬೃಹತ್‌ ಯೋಜನೆಗೆ ಭೂಮಿ ನೀಡಿ ನಿರಾಶ್ರಿತರಾಗಿರುವ ನಾವು ಈಗ ರೈಲ್ವೇ ಮಾರ್ಗಕ್ಕಾಗಿ ಮತ್ತೆ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದೇವೆ. ಈ ವಿನ್ನೆಲೆಯಲ್ಲಿಬದಲಿ ಸ್ಥಳದಲ್ಲಿರೈಲ್ವೇ ಮಾರ್ಗ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿತಿಳಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಅವರು ಮನವಿ ಸ್ವೀಕರಿಸಿದರು. ಗ್ರಾಮಸ್ಥರಾದ ರಾಮಚಂದ್ರ ಜಾನು ನಾಯ್ಕ, ಪುಂಡಲೀಕ ಎಂ. ನಾಯ್ಕ, ಸಾತು ಗೌಡ, ವಿನಾಯಕ ಗೌಡ, ಮಾಧವ ನಾಯ್ಕ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ